Advertisement

ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ

06:17 PM Nov 06, 2017 | Team Udayavani |

ನವದೆಹಲಿ:ಶತಮಾನಗಳ ಇತಿಹಾಸ ಹೊಂದಿರುವ ಕರಾವಳಿಯ ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. 

Advertisement

ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡುವಂತೆ ಪೆಟಾ(ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಆನಿಮಲ್ಸ್) ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಕರಾವಳಿ ಜಿಲ್ಲೆಯಾದ್ಯಂತ ನವೆಂಬರ್ ತಿಂಗಳಿನಿಂದ ಮಾರ್ಚ್ ವರೆಗೆ ಕಂಬಳ ಕ್ರೀಡೆ ನಡೆಯಲಿದೆ. ಆದರೆ ಪ್ರಾಣಿಗಳಿಗೆ ಕ್ರೀಡೆ ಹೆಸರಿನಲ್ಲಿ ಹಿಂಸೆಯನ್ನು ನೀಡುತ್ತಾರೆಂದು ಪೆಟಾ ಆರೋಪಿಸಿ, ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಮೇಲ್ಮನವಿ ಸಲ್ಲಿಸಿತ್ತು. ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next