Advertisement

ಮುಸ್ಲಿಂ ಸಮುದಾಯದ ವಿರುದ್ಧ ವರದಿ ; ಮಾಧ್ಯಮ ವಿರುದ್ಧ ಮಧ್ಯಂತರ ಆದೇಶವಿಲ್ಲ: ಸುಪ್ರೀಂಕೋರ್ಟ್‌

10:08 PM Apr 14, 2020 | Hari Prasad |

ತಬ್ಲೀಘಿ ಸಮಾವೇಶದಲ್ಲಿ ಭಾಗವಹಿಸಿದವರಿಂದ ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ಮುಸ್ಲಿಂ ಸಮುದಾಯದವರ ಮೇಲೆ ಗೂಬೆ ಕೂರಿಸುತ್ತಿವೆ. ಆ ರೀತಿ ವರದಿ ಮಾಡದಂತೆ ತಡೆಯಾಜ್ಞೆ ನೀಡಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

Advertisement

ಜಮಾತ್‌ ಉಲೇಮಾ-ಎ- ಹಿಂದ್‌ ಎಂಬ ಸಂಘಟನೆ ಈ ಅರ್ಜಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ನೇತೃತ್ವದ ನ್ಯಾಯ ಪೀಠ ಸಂಘಟನೆ ಸಲ್ಲಿಸಿರುವ ಅರ್ಜಿಯಂತೆ ಮಾಧ್ಯಮಗಳ ಮೇಲೆ ನಿಷೇಧ ಹೇರುವುದಿಲ್ಲ ಮತ್ತು ಈ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ಭಾರತೀಯ ಪತ್ರಿಕಾ ಮಂಡಳಿಯನ್ನೂ ದಾವೆಯಲ್ಲಿ ಸೇರಿಸಿಕೊಳ್ಳುವಂತೆ ನ್ಯಾಯಪೀಠ ಜಮಾತ್‌ಗೆ ಸಲಹೆ ಮಾಡಿದೆ. ಮಾತ್ರವಲ್ಲದೆ ಮುಂದಿನ ವಾರ ಈ ಬಗ್ಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.

40 ಮಂದಿ ಪತ್ತೆ
ತಬ್ಲೀಘಿ ಸಮಾವೇಶದಲ್ಲಿ ಭಾಗವಹಿಸಿ ತಲೆಮರೆಸಿಕೊಂಡಿದ್ದ 58 ಮಂದಿ ಪೈಕಿ 40 ಮಂದಿಯನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಕ್ವಾರಂಟೈನ್‌ಗೆ ಕಳುಹಿಲಾಗಿದೆ ಎಂದಿದ್ದಾರೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್‌ ದೇಶಮುಖ್‌ ತಿಳಿಸಿದ್ದಾರೆ.ಮಿಕ್ಕ 18 ಜನರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next