Advertisement

ತಲಾಖ್‌: ಅರ್ಜಿ ವಜಾ

09:00 AM Nov 03, 2018 | Team Udayavani |

ಹೊಸದಿಲ್ಲಿ: ಒಂದೇ ಬಾರಿಗೆ ತ್ರಿವಳಿ ತಲಾಖ್‌ ನೀಡುವುದನ್ನು ಶಿಕ್ಷಾರ್ಹ ಅಪರಾಧ ಎಂದು ಘೋಷಿಸುವ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸುಗ್ರೀವಾಜ್ಞೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಶುಕ್ರವಾರದ ವಿಚಾರಣೆ ವೇಳೆ ವಕೀಲರು ಈ ಬಗ್ಗೆ ಪ್ರಸ್ತಾಪಿಸಿದಾಗ, ಸುಗ್ರೀವಾಜ್ಞೆಗೆ 6 ತಿಂಗಳು ಚಾಲ್ತಿಯಲ್ಲಿರುತ್ತದೆ. ಸಂಸತ್‌ನ ಚಳಿಗಾಲದ ಅಧಿವೇಶನವೂ ಸದ್ಯದಲ್ಲೇ ನಡೆಯಲಿದೆ. ಹೀಗಾಗಿ, ಇದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ನ್ಯಾಯಪೀಠ ಹೇಳಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next