Advertisement

Supreme Court; ವೈದ್ಯ ಸಂಘದ ಮುಖ್ಯಸ್ಥರ ಕ್ಷಮೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

11:41 PM Aug 27, 2024 | Team Udayavani |

ಹೊಸದಿಲ್ಲಿ: ಭಾರತೀಯ ಮೆಡಿಕಲ್‌ ಅಸೋಸಿಯೇಶನ್‌ (ಐಎಂಎ) ಮುಖ್ಯಸ್ಥ ಆರ್‌.ವಿ. ಅಶೋಕನ್‌ ಸುಪ್ರೀಂ ಕೋರ್ಟ್‌ ವಿರುದ್ಧ ತಾವು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಭೇಷರತ್‌ ಕ್ಷಮೆ ಯಾಚಿಸಿದ್ದಾರೆ. ಆದರೆ ಈ ಕ್ಷಮೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ.

Advertisement

ಪತಂಜಲಿ ಪ್ರಕರಣ ಕುರಿತಂತೆ ಸುಪ್ರೀಂ ಬಗ್ಗೆ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ಕ್ಷಮಾಪಣ ಪತ್ರವನ್ನು ಜಾಹೀರಾತಿನ ಮೂಲಕ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದ್ದು, ಅದರ ಆಯ್ದ ಭಾಗವನ್ನು ಅಶೋಕನ್‌ ಪರ ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದರು.

ಕ್ಷಮಾಪಣೆ ಪತ್ರದಲ್ಲಿ ಅಕ್ಷರಗಳ ಗಾತ್ರ ಚಿಕ್ಕದಾಗಿದ್ದು, ಓದುವುದಕ್ಕೂ ಅಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಜಾಹೀರಾತು ಪ್ರಕಟಿಸಿದ ಪತ್ರಿಕೆಯ ಪ್ರತಿಗಳನ್ನು ಒಂದು ವಾರದೊಳಗೆ ಸಲ್ಲಿಸಿ ಎಂದು ನ್ಯಾಯಪೀಠ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next