Advertisement

ಆಧಾರ್‌ ಕುರಿತ ಮಧ್ಯಂತರ ಆದೇಶಕ್ಕೆ ಸುಪ್ರೀಂ ನಕಾರ

03:45 AM Jun 28, 2017 | Team Udayavani |

ನವದೆಹಲಿ: ಕಲ್ಯಾಣ ಯೋಜನೆಗಳ ಲಾಭ ಪಡೆದುಕೊಳ್ಳಲು ಆಧಾರ್‌ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಮಧ್ಯಂತರ ಆದೇಶ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಆಧಾರ್‌ ಇಲ್ಲ ಎನ್ನುವ ಕಾರಣಕ್ಕಾಗಿ ಯಾರೂ ವಂಚನೆಗೆ ಒಳಗಾಗಿರುವ ಬಗ್ಗೆ ಈವರೆಗೂ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ಮಾಹಿತಿ ಇಲ್ಲ ಎಂದಿದೆ.

Advertisement

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, “ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ. ಇನ್ನೊಂದು ವಾರ ಕಾದು, ಬಳಿಕ ವಂಚಿತರಿದ್ದರೆ ಆ ಬಗ್ಗೆ ಮಾಹಿತಿ ನೀಡಬಹುದು’ ಎಂದಿದೆ. ಕೇಂದ್ರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಆಧಾರ್‌ ಇಲ್ಲದೇ ಕಲ್ಯಾಣ ಯೋಜನೆಯಿಂದ ವಂಚನೆಗೆ ಒಳಗಾಗಿರುವ ಬಗ್ಗೆ ಸರ್ಕಾರಕ್ಕೂ ಇದುವರೆಗೂ ಯಾವುದೇ ದೂರು ಬಂದಿಲ್ಲ. ಅಷ್ಟಕ್ಕೂ ಆಧಾರ್‌ ಇಲ್ಲದಿದ್ದರೂ ವೋಟರ್‌ ಐಡಿ, ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ಮತ್ತು ಪ್ಯಾನ್‌ಕಾರ್ಡ್‌ ಸೇರಿ 10 ಬೇರೆ ದಾಖಲೆಗಳಲ್ಲಿ ಒಂದನ್ನು ಲಗತ್ತಿಸಿ ಯೋಜನೆಗಳ ಲಾಭ ಪಡೆದುಕೊಳ್ಳಲು ಅನುವು ಮಾಡಿಕೊಡಲಾಗಿದೆ’ ಎಂದ‌ರು.

Advertisement

Udayavani is now on Telegram. Click here to join our channel and stay updated with the latest news.

Next