Advertisement

ಯೋಗೀಶ ಗೌಡ ಕೊಲೆ ಪ್ರಕರಣ: ಸುಪ್ರಿಂ ಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಅರ್ಜಿ ತಿರಸ್ಕೃತ

05:04 PM Feb 07, 2022 | Team Udayavani |

ಧಾರವಾಡ: ಹೆಬ್ಬಳ್ಳಿ ಜಿ.ಪಂ.ಸದಸ್ಯರಾಗಿದ್ದ ಯೋಗೀಶ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಪ್ರಶ್ನಿಸಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮನವಿಯನ್ನು ಸುಪ್ರಿಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

Advertisement

ರಾಜ್ಯ ಸರ್ಕಾರ 2019 ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ಕುರಿತು ಈಗಾಗಲೇ ವಿನಯ್ ಕುಲಕರ್ಣಿ ಅವರು ರಾಜ್ಯ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು, ಆದರೆ ಹೈಕೋರ್ಟ್ ಅವರ ಮನವಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರಿಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದರಿಂದ ಮಾಜಿ ಸಚಿವ ವಿನಯ್ ಮನವಿ ತಿರಸ್ಕೃತಗೊಂಡಂತಾಗಿದೆ.

ಇದನ್ನೂ ಓದಿ:ಹಿಜಾಬ್-ಕೇಸರಿ ಶಾಲು ವಿವಾದ ನಡುವೆ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

ಈಗಾಗಲೇ ವಿನಯ್ ಕುಲಕರ್ಣಿ ಅವರು ಒಂಭತ್ತು ತಿಂಗಳುಗಳ ಕಾಲ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದು,ಸದ್ಯಕ್ಕೆ ಧಾರವಾಡ ಜಿಲ್ಲೆ ಪ್ರವೇಶಿಸದೇ ಇರುವುದು ಸೇರಿದಂತೆ ಶರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಸುಪ್ರಿಂ ಕೋರ್ಟ್‌ನಲ್ಲಿ ವಿನಯ್‌ಗೆ ಹಿನ್ನೆಡೆಯಾದಂತಾಗಿದ್ದು, ಮತ್ತೆ ಸಂಕಷ್ಟ ಎದುರಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next