Advertisement

ಮತಪತ್ರ: ಅರ್ಜಿ ವಜಾಗೊಳಿಸಿದ ಸುಪ್ರೀಂ

04:15 AM Nov 23, 2018 | Team Udayavani |

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಬದಲಿಗೆ ಮತಪತ್ರಗಳನ್ನು ಬಳಸುವಂತೆ ನೀತಿ ರೂಪಿಸಬೇಕು ಎಂದು ಕೋರಿ ಎನ್‌ಜಿಒ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾ ಮಾಡಿದೆ.

Advertisement

ಇವಿಎಂ ದುರ್ಬಳಕೆ ನಡೆಯುವ ಕಾರಣ, ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಯಲು ಸಾಧ್ಯವಿಲ್ಲ ಎಂದು ನ್ಯಾಯ ಭೂಮಿ ಎಂಬ ಎನ್‌ಜಿಒ ಅರ್ಜಿ ಸಲ್ಲಿಸಿತ್ತು. ಇದನ್ನು ತಿರಸ್ಕರಿಸಿದ ಸಿಜೆಐ ರಂಜನ್‌ ಗೊಗೊಯ್‌ ನೇತೃತ್ವದ ಪೀಠ, ಪ್ರತಿಯೊಂದು ವ್ಯವಸ್ಥೆ ಮತ್ತು ಯಂತ್ರವು ಬಳಕೆಗೆ ಮತ್ತು ದುರ್ಬಳಕೆಗೆ ಒಳಪಡುತ್ತದೆ. ಅನುಮಾನ ಪಡುವುದಿದ್ದರೆ ಎಲ್ಲದರ ಬಗ್ಗೆಯೂ ಪಡಬೇಕಾಗುತ್ತದೆ. ಹಾಗಾಗಿ ನಿಮ್ಮ ಅರ್ಜಿಯನ್ನು ಸ್ವೀಕರಿಸಲಾಗದು ಎಂದಿತು.

Advertisement

Udayavani is now on Telegram. Click here to join our channel and stay updated with the latest news.

Next