Advertisement

ರಾಜ್ಯ ಸರ್ಕಾರದ ಮುಸ್ಲಿಮ್ ಕೋಟಾ ರದ್ದು ನಿರ್ಧಾರಕ್ಕೆ ಸುಪ್ರೀಂ ತಾತ್ಕಾಲಿಕ ತಡೆ

12:10 PM Apr 25, 2023 | Team Udayavani |

ಹೊಸದಿಲ್ಲಿ: ಮುಸ್ಲಿಮರಿಗೆ 4% ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9 ಕ್ಕೆ ಮುಂದೂಡಿದೆ.

Advertisement

ಈತನ್ಮಧ್ಯೆ, ಈ ಸರ್ಕಾರದ ಆದೇಶದ ಆಧಾರದ ಮೇಲೆ ಮೇ 9 ರವರೆಗೆ ಯಾವುದೇ ಪ್ರವೇಶ ಅಥವಾ ನೇಮಕಾತಿ ನಡೆಯುವುದಿಲ್ಲ ಎಂದು ಕರ್ನಾಟಕ ಸರ್ಕಾರ ಮತ್ತೊಮ್ಮೆ ಭರವಸೆ ನೀಡಿದೆ.

ಕರ್ನಾಟಕ ಸರ್ಕಾರವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದ ಆದೇಶದ ಆಧಾರದ ಮೇಲೆ ಯಾವುದೇ ಹೊಸ ನೇಮಕಾತಿಗಳು ಅಥವಾ ಪ್ರವೇಶಗಳನ್ನು ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠಕ್ಕೆ ಭರವಸೆ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next