Advertisement

ಆ.1ಕ್ಕೆ ಉದ್ಧವ್‌ ಬಣದ ಅರ್ಜಿ ವಿಚಾರಣೆ: ಸುಪ್ರೀಂ ಕೋರ್ಟ್‌

08:11 PM Jul 26, 2022 | Team Udayavani |

ನವದೆಹಲಿ: “ನೈಜ ಶಿವಸೇನೆ ಯಾರದ್ದು’ ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಉದ್ಧವ್‌ ಠಾಕ್ರೆ ಹಾಗೂ ಏಕನಾಥ ಶಿಂಧೆ ಬಣದ ನಡುವಿನ ಕಾದಾಟ ಮುಂದುವರಿದಿದೆ.

Advertisement

ನಮ್ಮದೇ ನೈಜ ಶಿವಸೇನೆ ಎಂದು ಹೇಳಿ ಶಿಂಧೆ ಬಣ ಸಲ್ಲಿಸಿರುವ ಅರ್ಜಿಯ ಕುರಿತು ತೀರ್ಮಾನ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ಅದನ್ನು ಪ್ರಶ್ನಿಸಿ ಉದ್ಧವ್‌ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಸುಪ್ರೀಂ ಕೋರ್ಟ್‌ಗೆ ಅರಿಕೆ ಮಾಡಿಕೊಂಡ ವಕೀಲ ಕಪಿಲ್‌ ಸಿಬಲ್‌, “ಪ್ರಕರಣ ಸುಪ್ರೀಂನಲ್ಲಿರುವಾಗ ಚುನಾವಣಾ ಆಯೋಗವು ನಿರ್ಧಾರಕ್ಕೆ ಬರುವುದು ತಪ್ಪಾಗುತ್ತದೆ. ಹೀಗಾಗಿ, ಆಯೋಗದ ತನಿಖೆಗೆ ತಡೆಯಾಜ್ಞೆ ತರಬೇಕು’ ಎಂದು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಆ.1ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ರಮಣ ನೇತೃತ್ವದ ನ್ಯಾಯಪೀಠ ಮಂಗಳವಾರ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next