Advertisement

ಎನ್ನಾರೈಗಳಿಗೆ ಮತ ಹಕ್ಕು ನೀಡಲು ಸಮಿತಿ ರಚಿಸಲು ಸುಪ್ರೀಂ ಸೂಚನೆ

09:28 PM Nov 01, 2022 | Team Udayavani |

ನವದೆಹಲಿ: ವಿದೇಶಗಳಲ್ಲಿ ಇರುವ ಅನಿವಾಸಿ ಭಾರತೀಯರಿಗೆ, ವಲಸೆ ಕಾರ್ಮಿಕರಿಗೆ ಮತದಾನದ ಹಕ್ಕುಗಳನ್ನು ನೀಡಬೇಕು ಎಂಬ ಬಗ್ಗೆ ಸಮಿತಿ ರಚಿಸಬೇಕು ಎಂದು ಸುಪ್ರೀಂಕೋರ್ಟ್‌ ಮಂಗಳವಾರ ಆದೇಶ ನೀಡಿದೆ.

Advertisement

ಅದು ನೀಡುವ ಸಲಹೆಯ ಆಧಾರದಲ್ಲಿ ಸಂಸತ್‌ನಲ್ಲಿ ವಿಧೇಯಕ ಮಂಡನೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರನ್ನೊಳಗೊಂಡ ನ್ಯಾಯಪೀಠ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಇನ್ನು ಹೆಚ್ಚಿನ ವಿಳಂಬ ಮಾಡಬಾರದು ಎಂದೂ ಸೂಚಿಸಿದೆ.

ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ದೇಶದ ಹೊರಗೆ ವಾಸಿಸುತ್ತಿರುವ ಭಾರತೀಯ ಮೂಲದವರು, ವಲಸೆ ಕಾರ್ಮಿಕರಿಗೆ ಮತ ಚಲಾಯಿಸುವ ಹಕ್ಕು ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಾಗ್ಧಾನ ಮಾಡಿದ್ದಾರೆ.

ಇನ್ನು ಈ ವಿಚಾರದಲ್ಲಿ ವಿಳಂಬ ಮಾಡಲು ಸಾಧ್ಯವಿಲ್ಲ. ಈಗಾಗಲೇ 9-10 ವರ್ಷಗಳು ಕಳೆದಿವೆ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next