Advertisement

ಮರಾಠಾ ಮೀಸಲು ನಿಯಮಕ್ಕೆ ಸುಪ್ರೀಂ ಮಧ್ಯಂತರ ತಡೆ

12:01 AM Sep 10, 2020 | mahesh |

ನವದೆಹಲಿ: ಮಹಾರಾಷ್ಟ್ರದಲ್ಲಿ ಜಾರಿಯಾಗಿರುವ ರಾಜ್ಯ ಸರ್ಕಾರದ ಉದ್ಯೋಗ, ಶಿಕ್ಷಣಸಂಸ್ಥೆಗಳಲ್ಲಿ ಮರಾಠಿ ಮೀಸಲು ವ್ಯವಸ್ಥೆಗೆ ಸುಪ್ರೀಂಕೋರ್ಟ್‌ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆ ಕುರಿತು ಹೆಚ್ಚಿನ ವಿಚಾರಣೆ ಗಾಗಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ದೆ ನೇತೃತ್ವದ ನ್ಯಾಯಪೀಠ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

Advertisement

ಸದ್ಯಕ್ಕೆ ಮೀಸಲು ಜಾರಿ ಬೇಡ. ಈ ತಡೆಯಿಂದ ಈ ವರ್ಷದ ಸರ್ಕಾರಿ ನೇಮಕ ಪ್ರಕ್ರಿಯೆ, ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ತೊಂದರೆಯಾಗಲಾರದು ಎಂದೂ ಹೇಳಿದೆ. ಮಹಾರಾಷ್ಟ್ರ ಸರ್ಕಾರದ ಮರಾಠಾ ಮೀಸಲು ಆದೇಶ ಪ್ರಶ್ನೆ ಮಾಡಿ ಬಾಂಬೆ ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅಲ್ಲಿ ಸರ್ಕಾರದ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್‌ ಹೇಳಿತ್ತು. ಆದ್ದರಿಂದ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಜುಲೈನಲ್ಲಿ ಬಾಂಬೆ ಹೈಕೋರ್ಟ್‌ ಆದೇಶದ ಬಳಿಕ ಮಹಾರಾಷ್ಟ್ರ ಸರ್ಕಾರ ಮೀಸಲು ಪ್ರಮಾಣವನ್ನು ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಶೇ.13 ಮತ್ತು ಉದ್ಯೋಗಕ್ಕೆ ಶೇ.12ಕ್ಕೆ ಇಳಿಕೆ ಮಾಡಿ ಆದೇಶ ಹೊರಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next