Advertisement

Gnanavapi: ಜ್ಞಾನವಾಪಿ ಮಸೀದಿಯ ನೀರಿನ ತೊಟ್ಟಿ ಶುಚಿಗೊಳಿಸಲು ಸುಪ್ರೀಂ ಅನುಮತಿ

08:00 PM Jan 16, 2024 | Pranav MS |

ನವದೆಹಲಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸೀಲ್‌ ಮಾಡಿದ ಪ್ರದೇಶದಲ್ಲಿರುವ ನೀರಿನ ತೊಟ್ಟಿ ಶುಚಿಗೊಳಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ. ಕಾಶಿ ವಿಶ್ವನಾಥ ದೇಗುಲ ಪಕ್ಕದ ಮಸೀದಿಯ ನೀರಿನ ತೊಟ್ಟಿಯಲ್ಲಿ ಕೆಲ ಮೀನುಗಳು ಸತ್ತಿದ್ದು, ಸ್ವತ್ಛಗೊಳಿಸಲು ಅನುಮತಿ ಕೋರಿ ಹಿಂದೂ ಮಹಿಳಾ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.

Advertisement

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಂಜುಮಾನ್‌ ಇಂತೆಜಾಮಿಯಾ ಮಸೀದಿ ಸಮಿತಿ, ನೀರಿನ ತೊಟ್ಟಿ ಸ್ವತ್ಛಗೊಳಿಸುವುದು ತಮ್ಮ ಕರ್ತವ್ಯ ಎಂದಿತ್ತು. ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ, ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮೇಲುಸ್ತುವಾರಿಯಲ್ಲಿ ನೀರಿನ ತೊಟ್ಟಿ ಶುಚಿಗೊಳಿಸುವಂತೆ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next