Advertisement

ಹುಣಸೂರು: ನಗರಸಭೆ ನೂತನ ಅಧ್ಯಕ್ಷೆ ಸೌರಭ ಸಿದ್ದರಾಜು ಅಧಿಕಾರ ಸ್ವೀಕಾರ

03:14 PM Oct 19, 2021 | Team Udayavani |

ಹುಣಸೂರು: ಹುಣಸೂರು ನಗರಸಭೆಯ ನೂತನ ಅಧ್ಯಕ್ಷೆ ಸೌರಭಸಿದ್ದರಾಜು ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಸದಸ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

Advertisement

ನಗರಸಭೆ ಅಧ್ಯಕ್ಷರ ಕೊಠಡಿಯಲ್ಲಿ ಗಾಂಧೀಜೀ, ಅಂಬೇಡ್ಕರ್, ಬಾಬುಜಗಜೀವನರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಅಧಿಕಾರ ಸ್ವೀಕರಿಸಿದರು. ಶಾಸಕ ಎಚ್.ಪಿ.ಮಂಜುನಾಥರು ಎಲ್ಲ ಸದಸ್ಯರ ವಿಶ್ವಾಸದೊಂದಿಗೆ ನಗರದ ಅಭಿವೃದ್ದಿಗೆ ಮುಂದಾಗಿ, ನಗರಸಭೆ ಅಧಿಕಾರಿ-ಸಿಬ್ಬಂದಿಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಾರ್ವಜನಿಕರು, ಬಡವರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿರೆಂದು ಅಧ್ಯಕ್ಷರಿಗೆ ಸಲಹೆ ನೀಡಿದರು.

ಶಾಸಕರ ನಿರ್ಧೇನದಂತೆ ಪಕ್ಷಾತೀತವಾಗಿ ಎಲ್ಲಾ ಸದಸ್ಯರು-ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವೆ. ಮುಖ್ಯವಾಗಿ ಸಮರ್ಪಕ ಕುಡಿಯುವ ನೀರು-ಬೀದಿ ದೀಪ ನಿರ್ವಹಣೆಗೆ ಆದ್ಯತೆ ನೀಡುವೆನೆಂದರು.

ಪೌರ ಕಾರ್ಮಿಕರಿಗೆ ಸನ್ಮಾನ:

ಇದೇ ವೇಳೆ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಪೌರಕಾರ್ಮಿಕ ಮುರುಗೇಶ, ವಾಟರ್ ಮೆನ್ ಗೌರಿಶಂಕರ್, ಅಟೆಂಡರ್ ಚನ್ನಪ್ಪರನ್ನು ಶಾಸಕರು-ಅಧ್ಯಕ್ಷರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಉಪಾಧ್ಯಕ್ಷ ದೇವನಾಯ್ಕ, ಸದಸ್ಯರು ಹಾಗೂ ಪೌರಾಯುಕ್ತ ರಮೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next