Advertisement

ಆಹಾರದ ಕಿಟ್‌ ವಿತರಿಸಿದ ಸೂರಜ್‌

08:07 AM May 11, 2020 | Suhan S |

ಹಾಸನ: ನಗರದ 20ನೇ ವಾರ್ಡ್‌ ಪೆನ್ಷನ್‌ ಮೊಹಲ್ಲಾದ ಬಡವರಿಗೆ ಜೆಡಿಎಸ್‌ ಯುವ ಮುಖಂಡ ಡಾ. ಸೂರಜ್‌ ರೇವಣ್ಣ ಭಾನುವಾರ ಆಹಾರದ ಕಿಟ್‌ಗಳನ್ನು ವಿತರಿಸಿದರು.

Advertisement

ಈ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೋವಿಡ್ ವೈರಸ್‌ ಪರಿಣಾಮ ಜಾರಿ ಯಲ್ಲಿರುವ ಲಾಕ್‌ಡೌನ್‌ನಿಂದ ಕೂಲಿ ಕಾರ್ಮಿಕರು, ಬಡವರು, ನಿರಾಶ್ರಿತರು ಸಂಕಷ್ಟ ಎದುರಿಸುತ್ತಿದ್ದಾರೆ. ಅಂತಹವರಿಗೆ ನೆರವು ನೀಡಿ ಸಾಂತ್ವನ ಹೇಳುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅನಿವಾರ್ಯವಾಗಿ ಮನೆಯಿಂದ ಹೊರ ಬರಬೇಕಾದರೆ ಮಾಸ್ಕ್, ಸ್ಯಾನಿಟೈಸರ್‌ ಬಳಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.  20ನೇ ವಾರ್ಡಿನ ನಗರಸಭೆ ಸದಸ್ಯ ಅಮೀರ್‌ ಜಾನ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next