Advertisement

ದೇವಿಕೆರಾ ಹೊಲದಲ್ಲಿದ್ದ 180 ಅಕ್ಕಿ ಚೀಲ ವಶ

11:56 AM Apr 18, 2020 | Naveen |

ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದ ಹತ್ತಿರದ ಹೊಲವೊಂದರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿ ಚೀಲಗಳನ್ನು ತಹಶೀಲ್ದಾರ್‌ ನೇತೃತ್ವದ ತಂಡ ಗುರುವಾರ ರಾತ್ರಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಹಶೀಲ್ದಾರ್‌ ಬಿರಾದಾರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 35 ಕೆಜಿ ತೂಕದ 180 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಫಜಲ್‌ ಮತ್ತು ಮುಬಾರಕ್‌ ಎಂಬುವವರಿಗೆ ಗೋದಾಮು ಸೇರಿದ್ದಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಯಾರೊಬ್ಬ ಮಾಲೀಕನು ಭೇಟಿ ನೀಡಿಲ್ಲ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಕ್ಕಿ ಪಡಿತರ ಅಥವಾ ಶಿಶು ಅಭಿವೃದ್ಧಿ ಇಲಾಖೆಗೆ ವಿತರಿಸಿದ್ದೇ ಎಂಬುದನ್ನು ತಿಳಿಯಲು ಆಹಾರ ಪೂರೈಕೆ ಇಲಾಖೆಗೆ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಲಾಲ್‌ಸಾಬ್‌ ಪೀರಾಪುರ ಅವರನ್ನು ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಲಾಗಿದೆ.

ಈ ಕುರಿತು ಸುರಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಹಶೀಲ್ದಾರ್‌ ಬಿರಾದಾರ ತಿಳಿಸಿದ್ದಾರೆ. ದಾಳಿಯಲ್ಲಿ ಪಿಎಸ್‌ಐ ಚಂದ್ರಶೇಖರ ನಾರಾಯಣಪುರ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಗ್ರಾಮ ಲೆಕ್ಕಿಗ ಪ್ರದೀಪಕುಮಾರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next