Advertisement

ಅಂಗಡಿ-ಹೋಟೆಲ್‌ ಮೇಲೆ ದಾಳಿ: ಪ್ಲಾಸ್ಟಿಕ್‌ ಸಾಮಗ್ರಿ ವಶ

04:57 PM Feb 19, 2020 | Naveen |

ಸುರಪುರ: ತಾಲೂಕಿನ ರತ್ತಾಳ, ದೇವಿಕೇರಿ, ರಂಗಂಪೇಠ-ತಿಮ್ಮಾಪುರ ಹಾಗೂ ಇನ್ನಿತರ ಸುತ್ತ ಮುತ್ತಲಿನ ಅಂಗಡಿ ಹೋಟೆಲ್‌ ಸೇರಿದಂತೆ 25ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ನಿಷೇಧಿತ ಪ್ಲಾಸ್ಟಿಕ್‌ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದು, ಕೆಲವರಿಗೆ ದಂಡ ವಿಧಿ ಸಿ ನೋಟಿಸ್‌ ನೀಡಲಾಗಿದೆ.

Advertisement

ಕೆಲ ಅಂಗಡಿಗಳಿಂದ ಒಟ್ಟು 8000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ ಹೇಳಿದರು. ತಾಲೂಕಿನ ವಿವಿಧ ಅಂಗಡಿ-ಹೋಟೆಲ್‌ ಗಳ ಮೇಲೆ ದಾಳಿ ನಡೆಸಿ ಮಾತನಾಡಿದ ಅವರು, 18 ವರ್ಷದೊಳಗಿನ ಶಾಲೆ ಬಿಟ್ಟ ಮಕ್ಕಳನ್ನು ಸರಕು ಸಾಗಾಣೆ ವಾಹನಗಳಲ್ಲಿ, ಹೊಲ ಗದ್ದೆ, ಕೂಲಿ, ಅಂಗಡಿ, ಹೋಟೆಲ್‌ ಸೇರಿದಂತೆ ಇನ್ನಿತರೆ ಕೆಲಸಗಳಲ್ಲಿ ಇಟ್ಟುಕೊಳ್ಳುವುದು ಕಂಡು ಬಂದರೆ ದಂಡದ ಜತೆಗೆ ಜೈಲು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಾಲೆ ಬಿಟ್ಟ ಮಕ್ಕಳು ಕೆಲಸಕ್ಕಾಗಿ ಸರಕು ಸಾಗಣೆ ವಾಹನಗಳಲ್ಲಿ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಮಕ್ಕಳ ಸಂರಕ್ಷಣೆ ಹಾಗೂ ಅನಾಹುತಗಳಾಗದಂತೆ ಮುನ್ನೆಚ್ಚರಿಕೆಯಾಗಿ ವಾಹನ ಮಾಲೀಕರಿಗೆ ಮೋಟರ್‌ ವಾಹನ ಕಾಯ್ದೆಯಡಿ ಆರ್‌ಟಿಒ ಮತ್ತು ಪೋಲಿಸ್‌ ಇಲಾಖೆಯವರು ಜಂಟಿಯಾಗಿ ತಪಾಸಣೆ ಮೂಲಕ ದಂಡದ ಜತೆಗೆ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಎಚ್ಚರಿಸಿದರು.

ಬಾಲ ಕಾರ್ಮಿಕ ಪದ್ಧತಿ 1986ರ ಕಾಯ್ದೆಯಡಿ 6ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಮತ್ತು ಇತರೆ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದ ಅವರು, ಅನಿರೀಕ್ಷಿತ ತಪಾಸಣೆ ಕೈಗೊಂಡು ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ ಅಂತಹ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಮಾಲೀಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಂಬಾಕು ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ, ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ, ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಅಮೃತರಾವ್‌ ಕೋತ್ವಾಲ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next