ಸುರಪುರ: ತಾಲೂಕಿನ ಬಹುತೇಕ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಬೆಳೆದ ಸೀತಾಫಲ ಹಣ್ಣಿಗೆ ರಾಜ್ಯ ಸೇರಿದಂತೆ ನೆರೆ ರಾಜ್ಯಗಳಲ್ಲೂ ಭಾರೀ ಬೇಡಿಕೆ ಬಂದಿದೆ.
Advertisement
ಮಳೆ ಪ್ರಮಾಣ ಕಳೆದ ಮೂರ್ನಾಲ್ಕು ವರ್ಷಗಳಿಂದ ಕಡಿಮೆ ಆಗಿದ್ದರಿಂದ ಇಳುವರಿ ಕಡಿಮೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಮಳೆಯಾಗಿದ್ದರಿಂದ ಉತ್ತಮ ಇಳುವರಿ ಬಂದಿದೆ. 2 ವರ್ಷಕ್ಕೊಮ್ಮೆ ಟೆಂಡರ್: ಈ ಹಣ್ಣು ಬೆಟ್ಟಗುಡ್ಡಗಳಲ್ಲಿ ಬೆಳೆಯುವುದರಿಂದ ಇದು ಅರಣ್ಯ ಇಲಾಖೆಗೆ ಒಳಪಡುತ್ತಿದ್ದು, ಅರಣ್ಯ ಇಲಾಖೆಯವರು 2 ವರ್ಷಕ್ಕೊಮ್ಮೆ ಟೆಂಡರ್ ಕರೆಯುತ್ತಾರೆ. ಕಳೆದ ಬಾರಿ 2017-18ನೇ ಸಾಲಿಗೆ 4 ಲಕ್ಷ ರೂ.ಗಳಿಗೆ ಗುತ್ತಿಗೆ ನೀಡಲಾಗಿತ್ತು. ಪ್ರಸ್ತಕ ವರ್ಷ 2019-20ನೇ ಸಾಲಿಗೆ 3.55 ಲಕ್ಷ ರೂ.ಗಳಿಗೆ ಟೆಂಡರ್ ಆಗಿದೆ.
Related Articles
Advertisement
ಸ್ಥಳೀಯವಾಗಿ ಮಾರಾಟ: ನಗರದ ಬಸ್ ನಿಲ್ದಾಣ, ಗಾಂಧಿ ವೃತ್ತ, ಅರಮನೆ ಮಾರ್ಗ, ಕೋತಿ ಮಹಲ, ಪಟೇಲ್ ವೃತ್ತ, ತರಕಾರಿ ಮಾರುಕಟ್ಟೆ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಸೀತಾಫಲ ಮಾರಲಾಗುತ್ತಿದೆ.