Advertisement

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

05:17 PM Oct 06, 2019 | Team Udayavani |

ಸುರಪುರ: ತಾಲೂಕು ಆಡಳಿತದಿಂದ ಅ. 13ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಗ್ರೇಡ್‌-2 ತಹಶೀಲ್ದಾರ್‌ ಸೋμಯಾ ಸುಲ್ತಾನ್‌ ಹೇಳಿದರು.

Advertisement

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಜಯಂತ್ಯುತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9:30 ಗಂಟೆಗೆ ಡೊಣ್ಣಿಗೇರಾದ ಮಹರ್ಷಿ ವಾಲ್ಮೀಕಿ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳ ಮುಂಖಾತರ ತಹಶೀಲ್ದಾರ್‌ ಕಚೇರಿವರೆಗೆ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.

ನಂತರ ವಾಲ್ಮೀಕಿ ಭವನದಲ್ಲಿ ಬಹಿರಂಗ ಕಾರ್ಯಕ್ರಮ ಆಯೋಜಸಲಾಗಿದ್ದು, ಶಾಸಕ ನರಸಿಂಹ ನಾಯಕ ರಾಜುಗೌಡ ಉದ್ಘಾಟಿಸುವರು. ತಾಲೂಕು ಪಂಚಾಯಿತಿ, ಎಪಿಎಂಸಿ ಅಧ್ಯಕ್ಷರು ಉಪಸ್ಥಿತರಿರುವರು. ಓರ್ವ ಉಪನ್ಯಾಸಕರಿಂದ ಮಹರ್ಷಿಗಳ ಕುರಿತು ಉಪನ್ಯಾಸ ನಡೆಯಲಿದೆ ಎಂದು ತಿಳಿಸಿದರು.

ಸಮಾಜದ ಹಿರಿಯ ಮುಖಂಡ ಉಪನ್ಯಾಸಕ ವೇಣುಗೋಪಾಲ ಜೇವರ್ಗಿ ಮಾತನಾಡಿ, ಜಯಂತಿಯನ್ನು ಕಾಟಾಚಾರಕ್ಕಾಗಿ ಆಚರಿಸಬೇಡಿ, ಅರ್ಥಪೂರ್ಣವಾಗಿ ಆಚರಿಸಿ. ಆಮಂತ್ರಣ ಪತ್ರಿಕೆಯಲ್ಲಿ ಉಪನ್ಯಾಸಕರ ಹೆಸರು ಕೊನೆ ಸಾಲಿನಲ್ಲಿ ಹಾಕುವುದು ಸರಿಯಲ್ಲ ಎಂದರು.

ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ ನಾಯಕ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಬಹುತೇಕ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿಲ್ಲ. ಪ್ರತಿ ಜಯಂತಿಗಳ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರಾಗುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ತಿಳಿಸಿದರೂ ತಾಲೂಕು ಆಡಳಿತ ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಗೈರಾದವರ
ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement

ಮುಖಂಡ ಅನೀಲ ಇಟ್ಟಂಗಿ, ಚಂದ್ರಶೇಖರ ದೇವರಗೋನಾಲ ಮಾತನಾಡಿ, ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರ ಸೇರಿದಂತೆ ಸರಕಾರಿ ಅರೇ ಸರಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಕಚೇರಿಗಳಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು. ತಾಲೂಕು ಆಡಳಿತದಿಂದ ನಡೆಯುವ ಜಯಂತ್ಯುತ್ಸವದಲ್ಲಿ
ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಕಟ್ಟುನಿಟ್ಟಾಗಿ ಸೂಚಿಸಬೇಕು ಎಂದು ಒತ್ತಾಯಿಸಿದರು.

ವೆಂಕಟೇಶ ಬೇಟೆಗಾರ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ
ಸಮಾಜದ ಸಾಧಕರು ಹಾಗೂ ಹತ್ತನೇ ತರಗತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಬೇಕು ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಪ್ರಭು ದೊರೆ, ರಾಜು ದರಬಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಅನೇಕ ಮುಖಂಡರು ಭಾಗವಹಿಸಿದ್ದರು. ಶಿರಸ್ತೇದಾರ್‌ ಕೊಂಡಲ ನಾಯಕ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next