Advertisement

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

09:02 PM Jul 07, 2024 | Team Udayavani |

ಸುರತ್ಕಲ್: ಕೃಷ್ಣಾಪುರ 8ನೇ ಬ್ಲಾಕ್ ಬಳಿ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

Advertisement

ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು.

ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರ ಪರಿಸರದ ಒಂದು ಮನೆಯಲ್ಲಿ ದಾಳಿ ನಡೆಸಿದಾಗ 16 ಜೀವಂತ ಗೋವು ಸಹಿತ ಕೆ.ಜಿ ಗಟ್ಟಲೆ ದನದ ಮಾಂಸ ಪತ್ತೆಯಾಗಿದೆ.

ಬಜರಂಗದಳ ಕಾರ್ಯಕರ್ತರು ಮತ್ತು ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜೀವಂತ ದನ ರಕ್ಷಿಸಿದ್ದಾರೆ.

Advertisement

ಮಾರಾಟ ಮಾಡುವ ಉದ್ದೇಶದಿಂದ ತಯಾರಿಸಿದ್ದ ದನದ ಮಾಂಸ, ಕೃತ್ಯಕ್ಕೆ ಬಳಸಿದ ವಾಹನವನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next