Advertisement

Students ದುರಂತ ಅಂತ್ಯ; ಶಾಸಕ ಡಾ.ಭರತ್ ದಿಗ್ಬ್ರಮೆ, ಶವಾಗಾರದಲ್ಲಿ ಕುಟುಂಬಸ್ಥರ ಆಕ್ರಂದನ

12:05 PM Feb 28, 2024 | Team Udayavani |

ಸುರತ್ಕಲ್: ಸುರತ್ಕಲ್ ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು  ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ದಿಗ್ಬ್ರಮೆ, ಆಘಾತ ವ್ಯಕ್ತಪಡಿಸಿದ್ದಾರೆ.

Advertisement

ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಪ್ರಮುಖ ಅಧಿಕಾರಿಗಳನ್ನು ಕಳಿಸಲಾಗುವುದು ಎಂದರು.

ತಾನು ಸ್ವತಹಃ ಗೃಹ ಸಚಿವರಿಗೆ ಮಾಹಿತಿ ನೀಡಿ ಕುಟುಂಬಕ್ಕೆ ಗರಿಷ್ಟ ಪರಿಹಾರ ಒದಗಿಸಲು ಮುಂದಾಗುತ್ತೇನೆ. ನೊಂದಿರುವ ಕುಟುಂಬಕ್ಕೆ ದೇವರು ನೋವು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ವಿದ್ಯಾರ್ಥಿ ವೃಂದ ತಮ್ಮ  ವಿದ್ಯಾಭ್ಯಾಸದ ಸಮಯದಲ್ಲಿ ಸುರಕ್ಷತೆಯಿಂದಿರಲು ಗಮನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವೆನ್ಲಾಕ್ ಶವಾಗಾರದಲ್ಲಿ ಕುಟುಂಬಸ್ಥರ ಆಕ್ರಂದನ

ಸುರತ್ಕಲ್ ಮಾಜಿ ಶಾಸಕ ಮೊಯ್ದಿನ್ ಬಾವಾ ಶವಾಗಾರಕ್ಕೆ ಭೇಟಿ ನೀಡಿ, ವಿಸ್ಯಾರ್ಥಿಗಳ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

Advertisement

ಮರಣೋತ್ತರ ಶವ ಪರೀಕ್ಷೆ ವೆನ್ಲಾಕ್ ಶವಾಗಾರದಲ್ಲಿ ನಡೆಯುತ್ತಿದ್ದು ಹೆತ್ತವರು, ಸಂಬಂಧಿಕರ ಆಕ್ರಂದನ ಮನ ಕಲಕುವಂತಿದೆ. ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಹಾಜರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next