Advertisement

ಸುರತ್ಕಲ್‌ : ಮಕ್ಕಳಿಗೆ ಟ್ರಾಫಿಕ್‌ ಅರಿವು ಕಾರ್ಯಕ್ರಮ

07:50 AM Jul 24, 2017 | Team Udayavani |

ಸುರತ್ಕಲ್‌: ಕೂಳೂರು ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್‌ ಸುರತ್ಕಲ್‌ ಮತ್ತು ಮಿಸ್ಬಾ ಶಾಲೆ ಕಾಟಿಪಳ್ಳ ಸಹಯೋಗದಲ್ಲಿ ಇತ್ತೀಚೆಗೆ ಟ್ರಾಫಿಕ್‌ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯ ಕ್ರಮ ನಡೆಯಿತು. 
ಮಂಗಳೂರು ಉತ್ತರ ಸಂಚಾರಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಂಜುನಾಥ್‌ ಅವರು ಆಡಿಯೋ ವಿಷುವಲ್‌ ಮೂಲಕ ಕಾರ್ಯಕ್ರಮ ನಡೆಸಿಕೊಟ್ಟರು. 

Advertisement

ಮಂಜುನಾಥ್‌ ಅವರು ಈಗಾಗಲೇ ಮಂಗಳೂರು ಉತ್ತರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅನೇಕ ಶಾಲೆಗಳಿಗೆ ಭೇಟಿ ಕೊಟ್ಟು ಮಕ್ಕಳಲ್ಲಿ ರಸ್ತೆ ಸುರಕ್ಷೆ ಮತ್ತು ವಾಹನ ಚಲಾವಣೆಯಲ್ಲಿ ಚಾಲಕರು ನಿರ್ವಹಿಸಬೇಕಾದ ಎಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟಿದ್ದು, ಚಿತ್ರಾಪುರದ ಪ್ರೌಢಶಾಲೆ ಮತ್ತು ಕುಳಾಯಿಯ ವೆಂಕಟರಮಣ ಪ್ರೌಢಶಾಲೆಯಲ್ಲಿ ಕೂಡ ಟ್ರಾಫಿಕ್‌ ಸಮಸ್ಯೆಯ ಬಗ್ಗೆ ಮಕ್ಕಳಲ್ಲಿ ಅರಿವು ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದರು. ಪ್ರತಿಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ ಆ ಮೂಲಕ ಬಹುಮಾನ ನೀಡಿ ಪ್ರೋತ್ಸಾಹಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಟ್ರಾಫಿಕ್‌ ನಿಯಮವನ್ನು ಮೈಗೂಡಿಸಿ ಅಪಘಾತ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದಾಗಿದೆ ಎಂಬುದು ಮಂಜುನಾಥ ಅವರು ಅಭಿಪ್ರಾಯ.

Advertisement

Udayavani is now on Telegram. Click here to join our channel and stay updated with the latest news.

Next