Advertisement

ಸುರತ್ಕಲ್: ಶಾಲಾ ಬಾಲಕ ನೇಣಿಗೆ ಶರಣು…ಕಾರಣ ನಿಗೂಢ

07:35 PM Feb 13, 2023 | Team Udayavani |

ಸುರತ್ಕಲ್‌: ಸುರತ್ಕಲ್‌ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ರವಿವಾರ ಮುಂಜಾನೆ ನಡೆದಿದೆ.

Advertisement

ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ. ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅನಿರೀಕ್ಷಿತವಾಗಿ ಯಾವುದೋ ಕಾರಣಕ್ಕೆ ಮನನೊಂದು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

**

ಬಿಹಾರಿಗಳ ಹೊಡೆದಾಟ ಪ್ರಕರಣ: ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಸುರತ್ಕಲ್‌: ಮಾರ್ಬಲ್‌ ಮಳಿಗೆಯೊಂದರಲ್ಲಿ ಕೆಲಸ ಮಾಡುವ ಬಿಹಾರದ ಕಾರ್ಮಿಕರ ನಡುವೆ ಶನಿವಾರ ರಾತ್ರಿ ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹೊಡೆದಾಟ, ಓರ್ವನ ಸಾವಿನಲ್ಲಿ ಅಂತ್ಯವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾದ ಮೂವರನ್ನು ಸುರತ್ಕಲ್‌ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next