Advertisement

ಸುರತ್ಕಲ್‌: ವ್ಯಕ್ತಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ: ಸ್ಥಿತಿ ಗಂಭೀರ

10:51 PM Dec 24, 2022 | Team Udayavani |

ಸುರತ್ಕಲ್‌: ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

Advertisement

ಕಾಟಿಪಳ್ಳ ನಿವಾಸಿ ಜಲೀಲ್‌ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಲೀಲ್‌ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next