Advertisement

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

08:53 PM Jul 06, 2024 | Team Udayavani |

ಮಂಗಳುರು: ಸುರತ್ಕಲ್‌ ಟೋಲ್‌ ಗೇಟ್‌ ವಿರುದ್ಧ ಏಳು ವರ್ಷ ಹೋರಾಟ ನಡೆಸಿ ತೆರವುಗೊಳಿಸುವಲ್ಲಿ ಶ್ರಮಿಸಿದ್ದ “ಟೋಲ್‌ಗೇಟ್‌ ವಿರೋಧಿ  ಹೋರಾಟ ಸಮಿತಿ, ಸುರತ್ಕಲ್‌’ನ 101 ಸದಸ್ಯರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

Advertisement

ಹೋರಾಟಗಾರರ ಮೇಲೆ ಹಿಂದಿನ ಬಿಜೆಪಿ ಸರಕಾರ ಮೊಕದ್ದಮೆ ಹೂಡಿತ್ತು. ನ್ಯಾಯಾಲಯದಿಂದ ಸಮನ್ಸ್‌ ಜಾರಿಯಾದ ಹಿನ್ನೆಲೆಯಲ್ಲಿ ಶನಿವಾರ ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದರು. ಮಾಜಿ ಕಾರ್ಪೊರೇಟರ್‌ ಪ್ರಜ್ವಲ್‌ ಕುಳಾಯಿ ತಮ್ಮ ಜಮೀನಿನ ದಾಖಲೆಯ ಮೂಲಕ ಜಾಮೀನು ಭದ್ರತೆ ಒದಗಿಸಿದರು. ಹಿರಿಯ ನ್ಯಾಯವಾದಿ ದಿನೇಶ್‌ ಹೆಗ್ಡೆ ಉಳೆಪಾಡಿ ನೇತೃತ್ವದಲ್ಲಿ ಚರಣ್‌ ಶೆಟ್ಟಿ ಪಂಜಿಮೊಗರು, ಅಶ್ವಿ‌ನಿ ಹೆಗ್ಡೆ, ನಿತಿನ್‌ ಕುತ್ತಾರ್‌, ಅನ್ನು ಮಲಿಕ್‌, ಮನೋಜ್‌ ವಾಮಂಜೂರು, ಹಸೈನಾರ್‌ ಗುರುಪುರ, ಶೆರ್ವಿನ್‌ ಸೊಲೊಮಾನ್‌ ಮೊದಲಾದ ಹೋರಾಟಗಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಅವರು, ವಿವಿಧ ಸಮಾನ ಮನಸ್ಕ ಪಕ್ಷದವರು ಹೋರಾಟದಲ್ಲಿ ಭಾಗವಹಿಸಿದ್ದು, ಎಲ್ಲರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಹಿಂಪಡೆಯುವಂತೆ ಈಗಾಗಲೇ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಉಸ್ತುವಾರಿ ಸಚಿವ ಬಳಿಯೂ ಈ ವಿಚಾರದ ಕುರಿತು ಚರ್ಚಿಸಿದ್ದೇವೆ. ಪ್ರಕರಣದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next