Advertisement

ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಸುರೇಶ ಅಂಗಡಿ

09:25 AM Jul 11, 2020 | sudhir |

ಬೆಳಗಾವಿ: ಕೋವಿಡ್ ನಿಂದಾಗಿ ಇಡೀ ದೇಶವೇ ಸಮಸ್ಯೆಯಲ್ಲಿ ಇದೆ. ಇಂತಹ ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಸಿದ್ದರಾಮಯ್ಯ ಬಹಳ ಹಿರಿಯರು. ಟೀಕೆಗಾಗಿ ರಾಜಕಾರಣ ಮಾಡುವುದು ಸರಿಯಲ್ಲ. ಈಗ ಎಲ್ಲರೂ ಒಟ್ಟಾಗಿ ರಾಜ್ಯ ಮತ್ತು ದೇಶದ ಸ್ಥಿತಿಯನ್ನು ಸುಧಾರಿಸಲು ಸಹಕರಿಸಬೇಕು ಎಂದರು.

ರಾಜಕಾರಣದಲ್ಲಿ ವಿಪಕ್ಷ ನಾಯಕರಿಂದ ಟೀಕೆ ಬರುವುದು ಸಹಜ. ಆದರೆ ಸಿದ್ದರಾಮಯ್ಯ ಅವರು ಟೀಕಿಸಲೇ ಬೇಕು ಎಂದು ಟೀಕಿಸುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಸೇರಿ ಹಿರಿಯರಿಗೆಲ್ಲ ಗೌರವ ಕೊಡುತ್ತಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next