Advertisement

ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ಊಹಾಪೋಹ : ಸುರೇಶ್ ಕುಮಾರ್ ಪ್ರತಿಕ್ರಿಯೆ

12:47 PM May 17, 2021 | Team Udayavani |

ಬೆಂಗಳೂರು : ಕೋವಿಡ್  ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು‌ ಪರೀಕ್ಷೆಗಳನ್ನು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

Advertisement

ಈ ಕುರಿತು ಸ್ಪಷ್ಟನೆ ನೀಡಿರುವ ಅವರು,ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ‌ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ

ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು  ಅವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next