Advertisement

ಶಾಸಕ ಮನಗೂಳಿ ನಿಧನಕ್ಕೆ ಸುರೇಶ್ ಕುಮಾರ್ ಸಂತಾಪ

07:51 PM Jan 28, 2021 | Team Udayavani |

ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಧುರೀಣ ಹಾಗೂ ಶಾಸಕ ಮಲ್ಲಪ್ಪ ಸಿ. ಮನಗೂಳಿ ಅವರ ನಿಧನಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಸಮಾಜಸೇವೆಯನ್ನೇ ಉಸಿರಾಗಿಸಿಕೊಂಡಿದ್ದ ಅವರು ಜನಸೇವಾ ನಿಷ್ಠ ಹಾಗೂ ಪಕ್ಷ  ನಿಷ್ಠ ರಾಜಕಾರಣಿಯಾಗಿದ್ದರು. ಕೊನೆಯುಸಿರಿರುವ ತನಕವೂ  ಒಂದೇ ಪಕ್ಷದಲ್ಲಿದ್ದ ಅವರು ಅಪರೂಪದ ರಾಜಕಾರಣಿಯಾಗಿದ್ದರು ಎಂದು ಸುರೇಶ್ ಕುಮಾರ್ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್

ಮಾತಿಗೆ ತಪ್ಪದ ರಾಜಕಾರಣಿ ಎಂದೇ ಹೆಸರಾಗಿದ್ದ ಮನಗೂಳಿಯವರ ನಿಧನದಿಂದಾಗಿ ರಾಜ್ಯದ ನೈಜ ಸಮಾಜ ಸೇವಾ ಕ್ಷೇತ್ರಕ್ಕೆ ತುಂಬಲಾರದ ಹಾನಿಯಾಗಿದೆ ಹಾಗೆಯೇ ನಿಷ್ಠಾವಂತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಸಚಿವರು ಹೇಳಿದ್ದಾರೆ. ಹಿರಿಯ ಧುರೀಣ ಎಂ.ಸಿ. ಮನಗೂಳಿಯವರ ನಿಧನದಿಂದ ನೊಂದಿರುವ ಅವರ ಅಭಿಮಾನಿಗಳು ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next