Advertisement

ಬಿಜೆಪಿ ಬೆಂಬಲಿತರ ಪರ ಸುರೇಶ್‌ ಪ್ರಚಾರ

03:46 PM Dec 16, 2020 | Suhan S |

ಗುಂಡ್ಲುಪೇಟೆ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌ ಮತ್ತು ಶಾಸಕಸಿ.ಎಸ್‌.ನಿರಂಜನಕುಮಾರ್‌ ನೇತೃತ್ವದಲ್ಲಿ ಕಾರ್ಯಕರ್ತರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು.

Advertisement

ತಾಲೂಕಿನ ಹಸಗೂಲಿ ಗ್ರಾಮದ ಮನೆ ಮನೆಗಳಿಗೆ ತೆರಳಿದ ಸಚಿವರು, ಪಂಚಾಯತ್‌ ರಾಜ್‌ ಜಾರಿಗೆ ಬರಲು ತಾಲೂಕಿನವರೇ ಆದ ಮಾಜಿ ಸಚಿವ ಅಬ್ದುಲ್‌ ನಜೀರ್‌ಸಾಬ್‌ ಅವರು ಕಾರಣರಾಗಿದ್ದರು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಶಕ್ತಿ ತುಂಬುತ್ತಿದ್ದಾರೆ. ಶಾಸಕ ಹಾಗೂ ಸಂಸದರಿ ಗಿಂತಲೂ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೆಚ್ಚಿನ ಅವಕಾಶ ವಿದೆ. ಆದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಮೂಲಕ ಗ್ರಾಮಸ್ವರಾಜ್‌ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಮತ ದಾರರಲ್ಲಿ ಮನವಿ ಮಾಡಿದರು.

ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಮಾತನಾಡಿ, ಕ್ಷೇತ್ರದ 34 ಗ್ರಾಮ ಪಂಚಾಯ್ತಿ ಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಬಿಜೆಪಿ ಬೆಂಬಲಿತರನ್ನಾಗಿ ಕಣಕ್ಕಿಸಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಮತ್ತುಉತ್ತಮ ಸೇವೆಗಾಗಿ ನಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡಿದರು. ಈ ವೇಳೆ ಮುಖಂಡರಾದ ಕೊಡಸೋಗೆ ಶಿವಬಸಪ್ಪ, ಜಗ ದೀಶ್‌, ಪ್ರಣಯ್‌ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next