Advertisement

ಸರ್ಕಾರಿ ಸೇವೆ ವಿಳಂಬಕ್ಕೆ ಪರಿಹಾರ ಪಡೆಯುವುದು ಜನರ ಹಕ್ಕು: ಸುರೇಶ್ ಕುಮಾರ್

03:00 PM Nov 30, 2020 | keerthan |

ಬೆಂಗಳೂರು: ಸರ್ಕಾರದಿಂದ ದೊರೆಯಬಹುದಾದ ಸೇವೆಗಳನ್ನು ಪಡೆಯುವುದು ಮತ್ತು ಸೇವೆಗಳು ವಿಳಂಬವಾದರೆ ಆ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿರುವುದರಿಂದ ಸಾರ್ವಜನಿಕರು ಈ ಕುರಿತು ಹೆಚ್ಚು ಜಾಗೃತರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

Advertisement

ಸೋಮವಾರ ವಿಧಾನಸೌಧದಲ್ಲಿ ನ.30ರಿಂದ ಡಿ. 5ರವರಗೆ ನಡೆಯುವ ಸಕಾಲ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ನಂತರ ಸಕಾಲ ಸೇವೆಗಳಲ್ಲಿ ಸ್ವಲ್ಪ ವ್ಯತ್ಯಯವಾಗಿದ್ದು, ಅದಕ್ಕೆ ಚುರುಕು ನೀಡಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಪಡೆಯಲು ಅನುವಾಗುವಂತೆ ಸಕಾಲ ಸೇವೆಗಳ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸಲಾಗುತ್ತಿದೆ ಎಂದರು.

ಲಭ್ಯ ಸೇವೆ ಪಡೆಯುವುದು ಸಾರ್ವಜನಿಕರ ಹಕ್ಕು ಆಗಿರುವಂತೆಯೇ ಸಕಾಲದಲ್ಲಿ ಅದನ್ನು ಒದಗಿಸುವುದು ಯಾವುದೇ ಸರ್ಕಾರದ ಹಾಗೆಯೇ ವ್ಯವಸ್ಥೆಯ ಕರ್ತವ್ಯವಾಗಿರುವುದರಿಂದ ಇದರ ಸಾಕಾರಕ್ಕೆ ಸಕಾಲ ಸೇವೆ ಜಾರಿಗೆ ಬಂದಿದ್ದು, ಅದನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವುದು ಸಪ್ತಾಹದ ಉದ್ದೇಶವಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಯಾವುದೇ ಸೇವೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು.  ವಿಳಂಬದಿಂದ ಸಕಾಲದ ಯೋಜನೆಯ ಉದ್ದೇಶ ಫಲಪ್ರದವಾಗುವುದಿಲ್ಲ. ಅರ್ಜಿ ನಿರಾಕರಿಸುವುದು, ಸಕಾಲ ಯೋಜನೆ ಮೂಲಕ ಅರ್ಜಿ ಸ್ವೀಕರಿಸದೇ ಇರುವುದು, ವಿನಾಕಾರಣ ಅರ್ಜಿ ತಿರಸ್ಕರಿಸುವುದು, ಉದ್ದೇಶಪೂರ್ವಕ ವಿಳಂಬ ಮಾಡುವಂತಹ ಪ್ರಕರಣಗಳು ಕಂಡುಬರುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕುವುದುರೊಂದಿಗೆ ಎಂದು ಸುರೇಶ್ ಕುಮಾರ್ ಹೇಳಿದರು.

ಇದನ್ನೂ ಓದಿ:ಗ್ರಾ.ಪಂ ಚುನಾವಣೆಗೆ ದಿನ ನಿಗದಿ:ಯಾವ ತಾಲೂಕಿನಲ್ಲಿ ಯಾವಾಗ ಚುನಾವಣೆ?ಇಲ್ಲಿದೆ ಸಂಪೂರ್ಣ ಪಟ್ಟಿ

Advertisement

ಸಕಾಲ ಸೇವೆ ಯೋಜನೆ ಅರಂಭವಾದಂದಿನಿಂದ ಈ ತನಕ 22,88,81,652 ಅರ್ಜಿಗಳು ಬಂದಿದ್ದು, ಅದರಲ್ಲಿ 22,82,55,686 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.  ಕಳೆದ ಅಕ್ಟೋಬರ್ ನಲ್ಲಿ ಸಕಾಲ ಅರ್ಜಿ ವಿಲೇವಾರಿಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ, ಚಿಕ್ಕಮಗಳೂರು ದ್ವಿತೀಯ, ಚಿಕ್ಕಬಳ್ಳಾಪುರ ತೃತೀಯ ಸ್ಥಾನ ಪಡೆದರೆ, ರಾಯಚೂರು, ಬೀದರ್ ಮತ್ತು ಬೆಂಗಳೂರು ನಗರ ಕೊನೆಯ  ಮೂರು ಸ್ಥಾನದಲ್ಲಿವೆ  ಎಂದು ಸಚಿವರು ಹೇಳಿದರು.

ವಿಶೇಷವಾಗಿ ಪ್ರತಿಯೊಂದು ಇಲಾಖಾ ಕಚೇರಿಯಲ್ಲೂ ಸಕಾಲ ಸೇವೆ ಪಡೆಯುವ ಕುರಿತು ಸಾರ್ವಜನಿಕರ ಗಮನಕ್ಕೆ ಬರುವಂತೆ ಫಲಕ ಹಾಕುವುದು ಕಡ್ಡಾಯವಾಗಿದ್ದು, ಸಕಾಲ ಸೇವೆಗಳು ಇರುವ ಕುರಿತಂತೆ ಇಲಾಖೆಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಹಾಗೆಯೇ ಸೇವೆಯ ವಿಳಂಬದ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವ ಕುರಿತು ಜಾಗೃತಿ ಮೂಡಿಸುವುದು ಇಲಾಖೆಗಳ ಕರ್ತವ್ಯವಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next