Advertisement

ಉದಯವಾಣಿ ವರದಿ ಫಲಶ್ರುತಿ: ಹನೂರು ಕಾಲೇಜು ಸ್ಥಳಾಂತರಿಸದಂತೆ ಡಿಸಿಎಂಗೆ ಸುರೇಶ್ ಕುಮಾರ್ ಪತ್ರ

04:12 PM Jun 16, 2020 | keerthan |

ಹನೂರು (ಚಾಮರಾಜನಗರ  ): ತಾಲೂಕಿನ ಏಕೈಕ ಪದವಿ ಕಾಲೇಜನ್ನು ಸ್ಥಳಾಂತರ ಮಾಡದಂತೆ  ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ.

Advertisement

ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿರುವ ಸಂಬಂಧ ಜೂನ್.11ರ ಉದಯವಾಣಿ ಪತ್ರಿಕೆಯಲ್ಲಿ “ಪದವಿ ಕಾಲೇಜು ಸ್ಥಳಾಂತರಕ್ಕೆ ಆದೇಶ”ಎಂಬ ಶೀರ್ಷಿಕೆಯಡಿ ವಿಸ್ಮೃತ ವರದಿ ಪ್ರಕಟಿಸಲಾಗಿತ್ತು.

ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ.

ಕ್ಷೇತ್ರದ ಶಾಸಕರಾದ ನರೇಂದ್ರ ರಾಜೂಗೌಡ ಅವರು ನೀಡಿರುವ ಮನವಿ ಪತ್ರದ ಜೊತೆಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಕೂಡ ಪತ್ರ ಬರೆದಿದ್ದು, ಈ ಕಾಲೇಜು ತಾಲೂಕಿನ ಏಕೈಕ ಕಾಲೇಜಾಗಿದ್ದು ಪ್ರಸಕ್ತ ಸಾಲಿನಲ್ಲಿ 325 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಭಾಗದ ಗುಡ್ಡಗಾಡು ಪ್ರದೇಶ, ಕಾಡಂಚಿನ ಗ್ರಾಮಗಳು ಮತ್ತು ಪರಿಶಿಷ್ಠ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಠಿಯಿಂದ ಕಾಲೇಜನ್ನು ಇಲ್ಲಿಯೇ ಉಳಿಸಿಕೊಳ್ಳುವಂತೆ ಹಾಗೂ ಮುಂದುವರೆಸುವಂತೆ ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next