Advertisement

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

03:26 PM Jul 22, 2021 | Team Udayavani |

ಚೆನ್ನೈ: ಟೀಂ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಇದೀಗ ಹೊಸ ವಿವಾದವೊಂದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಕಮೆಂಟರಿ ಮಾಡುವ ವೇಳೆ ಹೇಳಿದ ಒಂದು ಮಾತಿನಿಂದ ರೈನಾ ಇಕ್ಕಟ್ಟಿಗೆ ಸಿಲುಕಿದ್ದಾರೆ.

Advertisement

ತಮಿಳುನಾಡು ಪ್ರೀಮಿಯರ್ ಲೀಗ್ ಕೂಟದಲ್ಲಿ ಸುರೇಶ್ ರೈನಾ ವೀಕ್ಷಕ ವಿವರಣೆ ನೀಡುತ್ತಿದ್ದರು. ಈ ವೇಳೆ ತಮಿಳುನಾಡಿನ ಸಂಸ್ಕೃತಿಯನ್ನು ನೀವು ಹೇಗೆ ಅಳವಡಿಸಿಕೊಂಡಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ರೈನಾ, 2004ರಿಂದಲೂ ನಾನು ಚೆನ್ನೈನಲ್ಲಿ ಆಡುತ್ತಿದ್ದೇನೆ. ನಾನೊಬ್ಬ ಬ್ರಾಹ್ಮಣನಾದ ಕಾರಣ ಇಲ್ಲಿನ ಸಂಸ್ಕೃತಿಯನ್ನು ಬೇಗನೇ ಅರಿಯಲು ಸಾಧ್ಯವಾಗಿದೆ ಎಂದು ರೈನಾ ಹೇಳಿಕೆ ನೀಡಿದ್ದರು.

ರೈನಾ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆ ಎದುರಾಗಿದೆ. ಹಲವರಂತೂ ರೈನಾ ಹೇಳಿಕೆಗೆ ಕಿಡಿಕಾರಿದ್ದಾರೆ.

Advertisement

ಸುರೇಶ್ ರೈನಾ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆಡುತ್ತಾರೆ. ಉತ್ತರ ಪ್ರದೇಶದ ಸುರೇಶ್ ರೈನಾಗೆ ಚೆನ್ನೈನಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಚೆನ್ನೈ ಅಭಿಮಾನಿಗಳು ರೈನಾರನ್ನು ಪ್ರೀತಿಯಿಂದ ಚಿನ್ನ ಥಲಾ ಎಂದೇ ಕರೆಯುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next