Advertisement

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ

08:25 PM Jan 25, 2022 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಲಾವಿಕಲ್ ಬೋನಿನ ಶಸ್ತ್ರಚಿಕಿತ್ಸೆಗಾಗಿ ಏಳು ಸಾವಿರ ರೂಗಳನ್ನು ಲಂಚ ಸ್ವೀಕರಿಸುತ್ತಿದ್ದಾಗ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ. ಕೆ. ಸುದರ್ಶನ್ ಅವರನ್ನು ಏಳು ಸಾವಿರ ರೂಗಳ ಲಂಚ ಸ್ವೀಕರಿಸುತ್ತಿದ್ದ ಬಳಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಗೇಪಲ್ಲಿ ತಾಲೂಕಿನ ದೊಡ್ಡ ಕಾರಿನಲ್ಲಿ ಗ್ರಾಮದ ನಿವಾಸಿಯೊಬ್ಬರು ತಮ್ಮ ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಬಾಗೇಪಲ್ಲಿ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಶಸ್ತ್ರಚಿಕಿತ್ಸೆ ನಡೆಸಲು ಆಸ್ಪತ್ರೆಯ ಸರ್ಜನ್ ಡಾ. ಕೆ.ಸುದರ್ಶನ್ ಅವರು ಶಸ್ತ್ರಚಿಕಿತ್ಸೆಗಾಗಿ 10000 ಬೇಡಿಕೆಯನ್ನಿಟ್ಟು ಮುಂಗಡವಾಗಿ ಮೂರು ಸಾವಿರ ರೂಗಳನ್ನು ಪಡೆದುಕೊಂಡಿದ್ದರು.

ಈ ಸಂಬಂಧ ದೂರು ದಾಖಲಿಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಂ ಪ್ರವೀಣ್ ಅವರ ನೇತೃತ್ವದ ತಂಡ ಟ್ರ್ಯಾಪ್ ಕಾರ್ಯಚರಣೆ ನಡೆಸಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ.ಕೆ. ಸುದರ್ಶನ್ ಅವರನ್ನು ಏಳು ಸಾವಿರ ರೂಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next