Advertisement

ಸರ್ಜಿಕಲ್‌ ಸ್ಟ್ರೈಕ್‌ ಬಿಜೆಪಿ ನಡವಳಿಕೆಗೆ ಕಾಂಗ್ರೆಸ್‌ ಆಕ್ಷೇಪ

12:57 AM Feb 27, 2019 | Team Udayavani |

ಬೆಂಗಳೂರು: ಉಗ್ರರ ನೆಲೆಗಳ ಮೇಲೆ ದಾಳಿಯಾಗಿರುವುದನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ತಾನೇ ಯುದ್ಧ ಗೆದ್ದಂತೆ ಪ್ರಚಾರ ಪಡೆಯುತ್ತಿದೆ. ಯುಪಿಎ ಅಧಿಕಾರ ಅವಧಿಯಲ್ಲಿ ಏಳು ಬಾರಿ ಸರ್ಜಿಕಲ್‌ ಸ್ಟ್ರೈಕ್‌ ಮಾಡಲಾಗಿದ್ದು, ಎನ್‌ಡಿಎ ಅವಧಿಯಲ್ಲಿ ಮೂರು ಬಾರಿ ಸರ್ಜಿಕಲ್‌ ಸ್ಟ್ರೈಕ್‌ ಮಾಡಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಬಿಜೆಪಿಗೆ ತಿರುಗೇಟು ನೀಡಿದೆ.

Advertisement

ಪಾಕ್‌ನಲ್ಲಿ ನೆಲೆಸಿರುವ ಉಗ್ರರ ನೆಲೆಯ ಮೇಲೆ ದಾಳಿ ಮಾಡಿರುವ ಮಿರಾಜ್‌ -2000 ಯುದ್ಧ  ವಿಮಾನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಎಚ್‌ ಎಎಲ್‌ ನಿರ್ಮಿಸಿದೆ. ಕೇಂದ್ರ ರಕ್ಷಣಾ ಸಚಿವೆಗೆ ಎಚ್‌ಎಎಲ್‌ನ ಸಾಮರ್ಥ್ಯ ಏನು ಎಂಬುವುದು ಈಗಲಾದರೂ ಅರ್ಥವಾಗಲಿ. ಕಾಂಗ್ರೆಸ್‌ ಸರ್ಕಾರದಲ್ಲಿ ತಯಾರಿಸಲಾದ ಶಸ್ತ್ರಾಸ್ತ್ರಗಳು ಸೇನಾ ದಾಳಿಯ ನೆರವಿಗೆ ಬಂದಿವೆ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಸಮರ್ಥಿಸಿಕೊಂಡಿದೆ.

ಅಲ್ಲದೇ ಹಿಂದೆ ಸರ್ಜಿಕಲ್‌ ಸ್ಟ್ರೈಕ್‌ ಹಾಗೂ ಯುದ್ದಗಳು ನಡೆದಾಗ ಗೆಲುವಿನ ಕಿರೀಟವನ್ನು ಭಾರತೀಯ ಸೈನಿಕರಿಗೆ ನೀಡಲಾಗುತ್ತಿತ್ತು. ಈಗ ಉರಿ ಘಟನೆಯ ನಂತರ ಅದನ್ನು ಬಿಜೆಪಿ ಸಾಧನೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಟ್ವೀಟ್‌ ಮೂಲಕ ಬಿಜೆಪಿ ನಡವಳಿಕೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next