Advertisement

ಮತಗಳ ಸರ್ಜಿಕಲ್‌ ಸ್ಟ್ರೈಕ್‌: ಮಾಥೂರ್‌

09:20 AM Apr 26, 2018 | Karthik A |

ಉಡುಪಿ: ಬಿಜೆಪಿ ಕಾರ್ಯಕರ್ತರು ಸೈನಿಕರಿದ್ದಂತೆ. ಕಳೆದ ಚುನಾವಣೆಯಲ್ಲಿ ಪೆಟ್ಟು ತಿಂದಿರುವ ಕಾರ್ಯಕರ್ತರು ‘ಸರ್ಜಿಕಲ್‌ ಸ್ಟ್ರೈಕ್‌’ ರೀತಿಯಲ್ಲಿ ಮುನ್ನುಗ್ಗಿ ವಿಜಯದ ಅಭಿಯಾನವನ್ನು ಕರ್ನಾಟಕದಲ್ಲಿಯೂ ಮುಂದುವರಿಸಬೇಕು ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಪ್ರಕಾಶ್‌ ಮಾಥೂರ್‌ ಹೇಳಿದರು. ಎ. 24ರಂದು ಉಡುಪಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜರಗಿದ ನಗರ ಬಿಜೆಪಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಡಾ| ಮಹೇಂದ್ರ ಸಿಂಗ್‌ ಮಾತನಾಡಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ನೇತೃತ್ವದ ನಮ್ಮ ತಂಡ ಕಾಲಿಟ್ಟ ಕಡೆಗಳಲ್ಲಿ ಬಿಜೆಪಿ ಅಧಿಕಾರ ಪಡೆದಿದೆ. ಕರ್ನಾಟಕದಲ್ಲಿಯೂ ಇದೇ ಫ‌ಲಿತಾಂಶ ಶತಃಸಿದ್ಧ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸ್ವಾಗತಿಸಿದರು. ರಾಜ್ಯ ಯುವಮೋರ್ಚಾ ಪದಾಧಿಕಾರಿ ಪ್ರೇಮ್‌ ಕುಮಾರ್‌, ಅಸ್ಸಾಂ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯ್‌ ಗುಪ್ತಾ, ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಸುವರ್ಣ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಮಂಗಳೂರು ಚುನಾವಣ ಪ್ರಭಾರಿ ಉದಯಕುಮಾರ್‌ ಶೆಟ್ಟಿ, ನಗರ ಅಧ್ಯಕ್ಷ ಪ್ರಭಾಕರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್‌ ಆಚಾರ್ಯ, ಉಪೇಂದ್ರ ನಾಯಕ್‌, ಚುನಾವಣಾ ಉಸ್ತುವಾರಿ ಕಪ್ಪೆಟ್ಟು ಪ್ರವೀಣ್‌ ಕುಮಾರ್‌ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರಜನಿ ಹೆಬ್ಟಾರ್‌, ನಗರಸಭಾ ಸದಸ್ಯರಾದ ರಶ್ಮಿತಾ ಬಾಲಕೃಷ್ಣ, ನರಸಿಂಹ ನಾಯಕ್‌, ಮಹೇಶ್‌ ಠಾಕೂರ್‌, ಗೀತಾ ರವಿ ಶೇಟ್‌, ಹಿರಿಯ ಮುಖಂಡ ಸೋಮಶೇಖರ ಭಟ್‌ ಮತ್ತಿತರರು ಉಪಸ್ಥಿತರಿದ್ದರು. ಶ್ಯಾಮಲಾ ಕುಂದರ್‌ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next