Advertisement

ಗೋಕಾಕ ಅಚ್ಚರಿ: ಅಶೋಕ ಪೂಜಾರಿಗೆ ಕೈ ತಪ್ಪಿದ ಟಿಕೆಟ್; ಹೊಸಮುಖಕ್ಕೆ ಮಣೆ

12:32 PM Apr 06, 2023 | Team Udayavani |

ಬೆಳಗಾವಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಗೋಕಾಕ ಕ್ಷೇತ್ರಕ್ಕೆ ಅಚ್ಚರಿಯ ಹಾಗೂ ಆಘಾತ ಪಡುವಂತೆ ಹೊಸ ಮುಖಕ್ಕೆ ಮಣೆಹಾಕಲಾಗಿದೆ.

Advertisement

ವೃತ್ತಿಯಿಂದ ವೈದ್ಯರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಡಾ ಮಹಾಂತೇಶ ಕಡಾಡಿ ಅಚ್ಚರಿಯ ರೀತಿಯಲ್ಲಿ ಟಿಕೆಟ್ ಗಿಟ್ಟಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಗೋಕಾಕ ಕ್ಷೇತ್ರದಿಂದ ಅಶೋಕ ಪೂಜಾರಿ ತಮಗೆ ಟಿಕೆಟ್ ಸಿಗುತ್ತದೆ ಎಂದು ಬಹಳ ನಂಬಿಕೂತಿದ್ದರು. ಇದೇ ಕರಾರಿನ ಮೇಲೆಯೆ ತಮ್ಮನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು ಎಂದು ಪೂಜಾರಿ ಹೇಳಿಕೊಂಡಿದ್ದರು. ಆದರೆ ಈಗ ಕಾಂಗ್ರೆಸ್ ವರಿಷ್ಠರು ಈ ಎಲ್ಲ ನಿರೀಕ್ಷೆಗಳನ್ನು ಹುಸಿಮಾಡಿ ಅಚ್ಚರಿ ಪಡುವಂತೆ ಮಹಾಂತೇಶ ಕಡಾಡಿ ಅವರಿಗೆ ಟಿಕೆಟ್ ನೀಡಿದ್ದಾರೆ. ಈಗ ಅಶೋಕ ಪೂಜಾರಿ ಅವರ ಮುಂದಿನ ನಿರ್ಧಾರ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ:ಕೊನೆಗೂ Congress ಎರಡನೇ ಪಟ್ಟಿ ರಿಲೀಸ್: ಉಡುಪಿ ಸೇರಿ 42 ಕ್ಷೇತ್ರಗಳಿಗೆ ಟಿಕೆಟ್ ಫೈನಲ್

ಉಳಿದಂತೆ ಸವದತ್ತಿ ಕ್ಷೇತ್ರದಿಂದ ವಿಶ್ವಾಸ ವೈದ್ಯ ನಿಪ್ಪಾಣಿ ಕ್ಷೇತ್ರಕ್ಕೆ ಕಾಕಾಸಾಹೇಬ ಪಾಟೀಲ ಹಾಗೂ ಕಿತ್ತೂರು ಕ್ಷೇತ್ರದಿಂದ ಬಾಬಾಸಾಹೇಬ ಪಾಟೀಲ ಟಿಕೆಟ್ ಗಿಟ್ಟಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next