Advertisement

Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ

10:24 AM Mar 14, 2024 | Team Udayavani |

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಣ್ಗಾವಲು ಯೋಜನೆಗೆ ಚಾಲನೆ

Advertisement

ಗದಗ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬೀಗ ಹಾಕಿದ ಮನೆಗಳ ನಿಗಾ ವಹಿಸುವ ಕಣ್ಗಾವಲು ವ್ಯವಸ್ಥೆಯ ಉದ್ಘಾಟನೆ ಹಾಗೂ ಪೊಲೀಸ್ ಜಾಗೃತಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಜಾತ್ರೆ, ಪ್ರವಾಸ ಹಾಗೂ ಇನ್ನಿತರ ಕಾರ್ಯಗಳಿಗೆ 4-5 ದಿನ ಕಾಲ ಊರಿಗೆ ತೆರಳುವ ಸಂದರ್ಭದಲ್ಲಿ ನಿಮ್ಮ ಮನೆ ರಕ್ಷಣೆ ಮಾಡುವ ಯೋಜನೆಯಾಗಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 9480021100 ವಾಟ್ಸಾಪ್ ಮೆಸೇಜ್ ಮಾಡುವ ಮೂಲಕ ತಮ್ಮ ಮನೆಯ ಹೆಸರನ್ನು ನೊಂದಾಯಿಸಿ, ನಿಶ್ಚಿಂತೆಯಿಂದ ಊರಿಗೆ ತೆರಳಬಹುದಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಸಂಕದ ಸೇರಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next