Advertisement

ಲಿಂಗಾಯತ ಶಾಸಕರ ಕ್ಷೇತ್ರದಲ್ಲಿ ಗುಪ್ತಚರ ಇಲಾಖೆ ಮೂಲಕ ಸಮೀಕ್ಷೆ

06:20 AM Mar 30, 2018 | |

ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ರಾಜಕೀಯವಾಗಿ ಎಷ್ಟು ಲಾಭವಾಗುತ್ತದೆ ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಶಾಸಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಲ್ಲಿ ಗುಪ್ತಚರ ಇಲಾಖೆ ಮೂಲಕ ಸಮೀಕ್ಷೆ ನಡೆಸಿ, ಮತದಾರರ ಮನದಾಳ ತಿಳಿಯುವ ಪ್ರಯತ್ನ ನಡೆಸಿದ್ದಾರೆ.

Advertisement

ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಕೆಜೆಪಿ ಹಾಗೂ ಕೆಎಂಪಿ ಸೇರಿ ಒಟ್ಟು 49 ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತ ಶಾಸಕರಿದ್ದಾರೆ. ಆ ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡುವ ವಿಷಯ ಪರವಾಗಿರುವವರು,ವಿರೋಧಿಸುವವರು ಹಾಗೂ ತಟಸ್ಥವಾಗಿರುವವರ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. 

ವೀರಶೈವ ಲಿಂಗಾಯತರಿರುವ 49 ಕ್ಷೇತ್ರಗಳಲ್ಲಿ 20 ಶಾಸಕರು ಕ್ಷೇತ್ರಗಳಲ್ಲಿ ಸರ್ಕಾರದ ನಿರ್ಧಾರದ ಪರವಾಗಿದ್ದು, 9 ಕ್ಷೇತ್ರಗಳಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. 20 ಶಾಸಕರು ತಟಸ್ಥ ನಿಲುವು ಹೊಂದಿದ್ದಾರೆ. ಕಾಂಗ್ರೆಸ್‌ನ 29 ಲಿಂಗಾಯತ ಶಾಸಕರ ಕ್ಷೇತ್ರಗಳಲ್ಲಿ 19 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಲಿದ್ದು, 5 ಕ್ಷೇತ್ರಗಳಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
 

Advertisement

Udayavani is now on Telegram. Click here to join our channel and stay updated with the latest news.

Next