Advertisement

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಮತ್ತೆ ಇಬ್ಬರು ಆಯ್ಕೆ: ಬಿಸಿಸಿಐ ಅಧಿಕೃತ ಮಾಹಿತಿ

04:56 PM Jul 26, 2021 | Team Udayavani |

ಮುಂಬೈ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗಾಗಿ ಭಾರತ ತಂಡ ಕಠಿಣ ಅಭ್ಯಾಸ ನಡೆಸುತ್ತಿದೆ. ಆದರೆ ತಂಡಕ್ಕೆ ಗಾಯಾಳುಗಳ ಸಮಸ್ಯೆ ಕಾಡುತ್ತಿದ್ದು, ಹೀಗಾಗಿ ಮತ್ತೆ ಇಬ್ಬರು ಆಟಗಾರರನ್ನು ಇಂಗ್ಲೆಂಡ್ ಗೆ ಕರೆಸಲಾಗುತ್ತಿದೆ. ಈ ಬಗ್ಗೆ ಬಿಸಿಸಿಐ ಖಚಿತಪಡಿಸಿದೆ.

Advertisement

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಗಾಯಗೊಂಡಿದ್ದರು. ಅವರು ಈಗಾಗಲೇ ಭಾರತಕ್ಕೆ ಬಂದಿದ್ದಾರೆ. ಬಳಿಕ ಅಭ್ಯಾಸ ಪಂದ್ಯದಲ್ಲಿ ಆವೇಶ್ ಖಾನ್, ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದಾರೆ. ಇವರಿಬ್ಬರೂ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ:‘ದೊಡ್ಮನೆ’ ಜೊತೆ ಜಯಂತಿ ಒಡನಾಟ ಹೇಗಿತ್ತು ? ನೆನಪುಗಳನ್ನು ಮೆಲುಕು ಹಾಕಿದ ಅಪ್ಪು

ಈ ಕಾರಣಗಳಿಂದ ಬಿಸಿಸಿಐ ಯುವ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ರನ್ನು ಆಯ್ಕೆ ಮಾಡಿದೆ. ಅವರಿಬ್ಬರೂ ಸದ್ಯ ಶ್ರೀಲಂಕಾ ವಿರುದ್ದ ಸರಣಿ ಆಡುತ್ತಿದ್ದು, ಅಲ್ಲಿಂದಲೇ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಭಾರತ ತಂಡ ಇಂಗ್ಲೆಂಡ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಆ.4ರಿಂದ ಟ್ರೆಂಡ್ ಬ್ರಿಡ್ಜ್ ನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ.

Advertisement

ತಂಡ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಆಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್.

ಸ್ಟ್ಯಾಂಡ್‌ಬೈ ಆಟಗಾರರು: ಪ್ರಸಾದ್ ಕೃಷ್ಣ, ಅರ್ಜನ್ ನಾಗ್ವಾಸ್ವಾಲಾ

Advertisement

Udayavani is now on Telegram. Click here to join our channel and stay updated with the latest news.

Next