Advertisement

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಗೆ ರಕ್ಷಣೆ ಕೊಡಿ: ಮುಂಬೈ ಪೊಲೀಸ್ ಗೆ ಸಿಬಿಐ

02:39 PM Aug 29, 2020 | Nagendra Trasi |

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಹಿನ್ನಲೆಯಲ್ಲಿ ತನ್ನ ಹಾಗೂ ತನ್ನ ಕುಟುಂಬದವರಿಗೆ ಜೀವ ಬೆದರಿಕೆ ಇದ್ದಿರುವುದಾಗಿ ರಿಯಾ ಚಕ್ರವರ್ತಿ ಆರೋಪಿಸಿದ್ದು, ಈ ನಿಟ್ಟಿನಲ್ಲಿ ರಿಯಾ ಹಾಗೂ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಶನಿವಾರ (ಆಗಸ್ಟ್ 29, 2020) ಮುಂಬೈ ಪೊಲೀಸರಿಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.

Advertisement

ರಿಯಾ ಚಕ್ರವರ್ತಿ ಆಕೆಯ ನಿವಾಸದಿಂದ ಡಿಆರ್ ಡಿಒ ಗೆಸ್ಟ್ ಹೌಸ್ ಗೆ ಪ್ರಯಾಣಿಸುವ ವೇಳೆ ಅಗತ್ಯ ಭದ್ರತೆಯನ್ನು ಸಿಬಿಐ ಬೇಡಿಕೆಯಂತೆ ನೀಡಲಾಗುವುದು ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕೆಲವು ಮಾಧ್ಯಮದವರು ಕೂಡಾ ತನ್ನ ನಿವಾಸದ ಕಂಪೌಂಡ್ ಹಾರಿ ಬಲವಂತವಾಗಿ ಒಳಬರಲು ಪ್ರಯತ್ನಿಸುತ್ತಿದ್ದಾರೆ ಎಂದು ರಿಯಾ ಚಕ್ರವರ್ತಿ ಆರೋಪಿಸಿದ್ದು, ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ಕೊಡಬೇಕೆಂದು ಮಾಧ್ಯಮಗಳಿಗೆ ನೀಡಿದ್ದ ಸಂದರ್ಶನದಲ್ಲಿ ರಿಯಾ ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಶನಿವಾರ ಮುಂಬೈ ಪೊಲೀಸರು ರಿಯಾ ನಿವಾಸಕ್ಕೆ ಆಗಮಿಸಿದ್ದು, ಡಿಆರ್ ಡಿಒ ಕಚೇರಿಗೆ ವಿಚಾರಣೆಗೆ ಆಗಮಿಸಿದ ವೇಳೆ ಪೂರ್ಣ ಭದ್ರತೆ ನೀಡಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 28ರಂದು ಸಿಬಿಐ ಸುಮಾರು ಹತ್ತು ಗಂಟೆಗಳ ಕಾಲ ರಿಯಾ ಚಕ್ರವರ್ತಿಯನ್ನು ತನಿಖೆಗೆ ಒಳಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next