Advertisement

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

07:34 PM Jul 16, 2020 | Nagendra Trasi |

ನವದೆಹಲಿ: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೊನೆಗೂ ಪ್ರೇಯಸಿ, ನಟಿ ರಿಯಾ ಚಕ್ರವರ್ತಿ ಆಗ್ರಹಿಸಿರುವುದಾಗಿ ವರದಿ ತಿಳಿಸಿದೆ. ಸುಶಾಂತ್ ಸಾವಿಗೆ ನ್ಯಾಯ ಸಿಗಬೇಕಾದರೆ ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ರಿಯಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವುದಾಗಿ ವರದಿ ಹೇಳಿದೆ.

Advertisement

ಸುಶಾಂತ್ ಜೂನ್ 14ರಂದು ಮುಂಬೈನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಕಳೆದ ಕೆಲವು ತಿಂಗಳಿನಿಂದ ಸುಶಾಂತ್ ಭಾರೀ ಮಾನಸಿಕ ಒತ್ತಡದಲ್ಲಿದ್ದರು ಎಂದು ರಿಯಾ ವಿಚಾರಣೆ ವೇಳೆ ತಿಳಿಸಿದ್ದರು. ಸುಶಾಂತ್ ಪ್ರಕರಣವನ್ನು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುಶಾಂತ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಟ್ವೀಟರ್ ಮತ್ತು ಇನ್ಸ್ ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ಪೋಸ್ಟ್ ನಲ್ಲಿ, ಗೌರವಾನ್ವಿತ ಅಮಿತ್ ಶಾ ಸರ್.. ನಾನು ಸುಶಾಂತ್ ಸಿಂಗ್ ರಜಪೂತ್ ಅವರ ಗರ್ಲ್ ಫ್ರೆಂಡ್ ರಿಯಾ ಚಕ್ರವರ್ತಿ. ಸುಶಾಂತ್ ಆಕಸ್ಮಿಕವಾಗಿ ಸಾವನ್ನಪ್ಪಿ ತಿಂಗಳು ಕಳೆದು ಹೋಗಿದೆ. ನನಗೆ ಸರ್ಕಾರದ ಮೇಲೆ ಪೂರ್ಣ ವಿಶ್ವಾಸವಿದೆ. ಏನೇ ಆಗಲಿ ನ್ಯಾಯದ ದೃಷ್ಟಿಯಲ್ಲಿ ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುವುದು ಏನೆಂದರೆ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಯಾವ ಒತ್ತಡ ಸುಶಾಂತ್ ನನ್ನು ಈ ನಿರ್ಧಾರಕ್ಕೆ ದೂಡಿತ್ತು ಎಂಬುದು ತಿಳಿಯಬೇಕು…ರಿಯಾ ಚಕ್ರವರ್ತಿ, ಸತ್ಯಮೇವ ಜಯತೇ ಎಂದು ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next