Advertisement

ಮಂಗಳೂರನ್ನು ಮೆಚ್ಚಿದ್ದ ಸುಷ್ಮಾ

01:48 AM Aug 08, 2019 | sudhir |

ಮಂಗಳೂರು: ಸುಷ್ಮಾ ಸ್ವರಾಜ್‌ ಮಂಗಳೂರಿಗೆ ಹಲವು ಬಾರಿ ಭೇಟಿ ನೀಡಿ ಕರಾವಳಿಯ ಜನರ ಜತೆಗೆ ನಂಟು ಹೊಂದಿದ್ದರು. ದಕ್ಷಿಣ ಕನ್ನಡದ ಸುಸಂಸ್ಕೃತಿ, ಆಚಾರ ವಿಚಾರಗಳನ್ನು ಮೆಚ್ಚಿದ್ದರು.

Advertisement

1999, 2011, 2013ರಲ್ಲಿ ಅವರು ಮಂಗಳೂರಿಗೆ ಆಗಮಿಸಿ ಹಲವು ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು. 1999ರ ಲೋಕಸಭಾ ಚುನಾವಣೆ ಸಂದರ್ಭ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸಿದ್ದರು.
2011ರಲ್ಲಿ ಮಂಗಳೂರಿನಲ್ಲಿ ನಡೆದ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿದ್ದರು. 2013ರಲ್ಲಿ ಮತ್ತೆ ಆಗಮಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ಕರಾವಳಿಯ ಖಾದ್ಯ ಅಚ್ಚಮೆಚ್ಚು
ಮಂಗಳೂರಿಗೆ ಭೇಟಿ ನೀಡಿದ ವೇಳೆ ಕರಾವಳಿಯ ಖಾದ್ಯಗಳನ್ನು ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಂಘ ನಿಕೇತನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಕರಾವಳಿಯ ವಿಶೇಷ ಖಾದ್ಯಗಳನ್ನು ಪರಿಚಯಿಸಲಾಗಿತ್ತು.

2008 ಚುನಾವಣೆ ಸಂದರ್ಭ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹೆಲಿಪ್ಯಾಡ್‌ನ‌ಲ್ಲಿ ಇಳಿದು ಸೋಮನಾಥೇಶ್ವರ ದೇವಸ್ಥಾನ ಮತ್ತು ಶ್ರೀ ಸತ್ಯದೇವತಾ ದೇವಸ್ಥಾನಗಳಿಗೆ ಭೇಟಿ ನೀಡಿ ಮುಂದೆ ಈ ಭಾಗದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next