Advertisement

ಶಂಕಿತ ಬಾಂಗ್ಲಾ ವಲಸಿಗ ವಶಕ್ಕೆ

11:16 PM Oct 21, 2019 | Lakshmi GovindaRaju |

ಹಾಸನ: ಸಕಲೇಶಪುರ ತಾಲೂಕಿನಲ್ಲಿ ರೈಲ್ವೆ ಹಳಿಗಳ ಮೇಲೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಶಂಕಿತ ಬಾಂಗ್ಲಾ ವಲಸಿಗನನ್ನು ರೈಲ್ವೆ ಪೊಲೀಸರು ಸೋಮವಾರ ಸಂಜೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಭಾರೀ ಮಳೆಯಾಗುತ್ತಿರುವುದರಿಂದ ಭೂ ಕುಸಿತವಾಗಬಹುದೆಂಬ ಹಿನ್ನೆಲೆಯಲ್ಲಿ ಸಕಲೇಶಪುರ -ಆಲುವಳ್ಳಿ ನಡುವೆ ರೈಲ್ವೆ ಗ್ಯಾಂಗ್‌ಮನ್‌ಗಳು ಮತ್ತು ಎಂಜಿನಿಯರುಗಳು ರೈಲ್ವೆ ಮಾರ್ಗದ ಮೇಲೆ ಗಸ್ತು ತಿರುಗುತ್ತಿದ್ದಾಗ ಸುಮಾರು 18 ರಿಂದ 19 ವಯಸ್ಸಿನ ಯುವಕನೊಬ್ಬ ಅನುಮಾನಾಸ್ಪದವಾಗಿ ರೈಲ್ವೆ ಹಳಿಗಳ ಮೇಲೆ ಹೋಗುತ್ತಿದ್ದ. ಆತನನ್ನು ವಿಚಾರಿಸಿದಾಗ ಅತ ಸ್ಪಷ್ಟ ಮಾಹಿತಿ ನೀಡಲಿಲ್ಲ.

Advertisement

ಹಾಗಾಗಿ ಆತನನ್ನು ಸಕಲೇಶಪುರದ ರೈಲ್ವೆ ಪೊಲೀಸರಿಗೆ ತಂದು ಒಪ್ಪಿಸಿದ್ದಾರೆ. ರೈಲ್ವೆ ಪೊಲೀಸರು ಹಿರಿಯ ರೈಲ್ವೆ ಪೊಲೀಸರ ವಶಕ್ಕೆ ಆತನನ್ನು ಒಪ್ಪಿಸಿದ್ದು, ಆತ ಹಿಂದಿ ಮಿಶ್ರಿತ ಭಾಷೆ ಮಾತನಾಡುತ್ತಿದ್ದು, ಒಮ್ಮೆಮ್ಮೆ ಬಂಗಾಳಿ ಮಾತನಾಡುತ್ತಾನೆಂದು ರೈಲ್ವೆ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ರೈಲ್ವೆ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ರಾಜ್ಯ ಪೊಲೀಸರ ವಶಕ್ಕೆ ಒಪ್ಪಿಸಲು ನಿರ್ಧರಿಸಿರು ವುದಾಗಿ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next