Advertisement

ಲಂಚಕ್ಕೆ ಬೇಡಿಕೆ ಇಟ್ಟರೆ ಅಮಾನತು

10:46 PM Aug 24, 2020 | mahesh |

ಉಡುಪಿ: ಕೋವಿಡ್‌-19 ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಅಥವಾ ಸೀಲ್‌ಡೌನ್‌ ತೆಗೆಯಲು ಹಣ ಪಡೆದಿದ್ದರೆ ಜಿಲ್ಲೆಯಲ್ಲಿರುವ ಐದು ಮಂದಿ ಶಾಸಕರಿಗೆ ಮಾಹಿತಿ ನೀಡಿ. ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಅವರನ್ನು 24 ಗಂಟೆಯೊಳಗೆ ಅಮಾನತು ಮಾಡಲಾಗುವುದು ಎಂದು ಶಾಸಕ ರಘುಪತಿ ಭಟ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ಕೋವಿಡ್‌ ಪರಿಕ್ಷೆಯಲ್ಲಿ ಭಾರೀ ಗೋಲ್‌ಮಾಲ್‌ ಆಗುತ್ತಿದೆ. ಹಣ ಮಾಡಲು ಕೋವಿಡ್‌ ಸಂಖ್ಯೆ ಹೆಚ್ಚಿಸುತ್ತಿದ್ದಾರೆ ಎಂಬ ಸಂಶಯಗಳು ಜನರಲ್ಲಿವೆ. ಈ ಮೂಲಕ ಅಪಪ್ರಚಾರ ಮಾಡಲಾಗುತ್ತಿದೆ. ಕೋವಿಡ್‌ ವಿಚಾರದಲ್ಲಿ ಯಾರಿಗೂ ಯಾವುದೇ ಕಮಿಷನ್‌ ಸಿಗುವುದಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದರು.

ದಾಖಲೆ ನೀಡಿ
ಕೊರೊನಾ ಪರೀಕ್ಷೆ ಹೆಚ್ಚಳದಿಂದ ಪಾಸಿಟಿವ್‌ ಇದ್ದವರ ಸೋಂಕು ಮತ್ತಷ್ಟು ಜನರಿಗೆ ಹಬ್ಬುವುದು ತಪ್ಪುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ದಂಧೆ ವಿಚಾರ ಸತ್ಯಕ್ಕೆ ದೂರವಾದುದು. ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ನಿಜವಾಗಿದ್ದರೆ ಸೂಕ್ತ ದಾಖಲೆಗಳನ್ನು ಸಂಬಂಧಪಟ್ಟವರಿಗೆ ನೀಡಿ ತನಿಖೆಗೆ ಒತ್ತಾಯಿಸಬಹುದು. ಆರೋಗ್ಯಇಲಾಖೆಯ ಸಿಬಂದಿ ಕಳೆದ 6 ತಿಂಗಳಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿನಾಕಾರಣ ಆರೋಪದಿಂದ ಅವರ ಮಾನಸಿಕ ಸ್ಥೈರ್ಯಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next