Advertisement

JDS ನಿಂದ ಸಿ.ಎಂ.ಇಬ್ರಾಹಿಂ ಅಮಾನತು

11:55 PM Nov 17, 2023 | Team Udayavani |

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

Advertisement

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರನ್ನು ಜೆಡಿಎಸ್‌ ಪಕ್ಷದಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರದಾನಿ ಎಚ್‌.ಡಿ. ದೇವೇಗೌಡರು ಘೋಷಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ದೇವೇಗೌಡರು, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇಬ್ರಾಹಿಂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂ ಸಿರುತ್ತಾರೆ ಎಂದು ಪಕ್ಷದ ಹಿಂದಿನ ಮಹಾಪ್ರಧಾನ ಕಾರ್ಯದರ್ಶಿ ಎಸ್‌.ಎಲ್‌. ಭೋಜೇಗೌಡರು 2023ರ ಅ.19 ರಂದು ನೀಡಿರುವ ವರದಿ ಆಧರಿಸಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.

ಅಮಾನತಿಗೆ ಕಾರಣಗಳು

Advertisement

 ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.
 ಚಿಂತನ-ಮಂಥನ ಹೆಸರಲ್ಲಿ ಬೆಂಗಳೂರಿನಲ್ಲಿ 2023ರ ಅ.16ರಂದು ಸಮಾನ ಮನಸ್ಕರ ಸಭೆ ನಡೆಸಿ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆ ನೀಡಿ, ಸುಳ್ಳು ಆರೋಪಗಳನ್ನು ಮಾಡಿದ್ದಾರೆ.
 ನವೆಂಬರ್‌ 15ರಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ. ನಾಣು ಕೇರಳದ ತಿರುವನಂತಪುರದಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ವಿರೋಧಭಾಸದ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next