Advertisement

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

12:19 AM Jun 18, 2024 | Team Udayavani |

ಸುಳ್ಯ: ವಿದ್ಯುತ್‌ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್‌ ಶಾಕ್‌ ತಗಲಿ ವಿದ್ಯುತ್‌ ಕಂಬದಲ್ಲೇ ಕಾರ್ಮಿಕ ಮೃತಪಟ್ಟ ಘಟನೆ ಸೋಮವಾರ ಸುಳ್ಯ ತಾಲೂಕಿನ ಅಲೆಕ್ಕಾಡಿ ಸಮೀಪದ ಪಾರ್ಲ ಎನ್ನುವಲ್ಲಿ ಸಂಭವಿಸಿದೆ.

Advertisement

ಬೆಳ್ತಂಗಡಿ ತಾಲೂಕಿನ ಕೃಷ್ಣಪ್ಪ ಗೌಡ ಅವರ ಪುತ್ರ ಪ್ರಕಾಶ (29) ಮೃತರು. ಕಡಬ ಮೂಲದ ಸಂಸ್ಥೆಯ ವತಿಯಿಂದ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೆಕ್ಕಾಡಿಯ ಪಾರ್ಲ ಎನ್ನುವಲ್ಲಿ ಕಾರ್ಮಿಕರು ಮೆಸ್ಕಾಂ ಪಂಜ ಸೆಕ್ಷನ್‌ ವ್ಯಾಪ್ತಿಯ ವಿದ್ಯುತ್‌ ಲೈನ್‌ ದುರಸ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ.

ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಪ್ರಕಾಶ್‌ ಕಿರುಚಿದ್ದು, ಕಾರ್ಮಿಕರು ಬಂದು ನೋಡುವ ವೇಳೆ ಅವರು ಕಂಬದಲ್ಲೇ ಸಿಲುಕಿಕೊಂಡಿರುವುದು ಕಂಡುಬಂದಿತ್ತು. ವಿದ್ಯುತ್‌ ಪ್ರವಹಿಸಿ ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next