Advertisement

ಟ್ರಕ್ ಗೆ ಗುದ್ದಿದ ಕಾರು: ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಸಾವು

08:00 AM Nov 20, 2020 | keerthan |

ಪ್ರತಾಪ್ ಗಢ್: ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶ ರಾಜ್ಯದ ಪ್ರತಾಪ್ ಗಢ್ ನಲ್ಲಿ ನಡೆದಿದೆ.

Advertisement

ಎಸ್ ಯುವಿ ಕಾರು ಟ್ರಕ್ ಹಿಂಬಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ 11.45ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಪ್ರಯಾಗ್ ರಾಜ್- ಲಕ್ನೋ ಹೆದ್ದಾರಿಯ ದೇಶರಾಜ್ ಇನಾರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ:ಕಾಶ್ಮೀರ ಕಣಿವೆ: ಭಯೋತ್ಪಾದನ ಚಟುವಟಿಕೆಗಳಿಗೆ ಕಡಿವಾಣ

ಟ್ರಕ್ ನ ಟಯರ್ ಪಂಕ್ಷರ್ ಆದ ಕಾರಣ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿತ್ತು. ಈ ವೇಳೆ ವೇಗದಿಂದ ಬಂದ ಕಾರು ಟ್ರಕ್ ಗೆ ಗುದ್ದಿದೆ. ಪರಿಣಾಮ ಕಾರಿನ ಅರ್ಧ ಭಾಗ ಟ್ರಕ್ ನ ಒಳಗೆ ಸಿಲುಕಿಕೊಂಡಿತ್ತು. ಅಪಘಾತದಲ್ಲಿ ಮೃತಪಟ್ಟ ಮಕ್ಕಳು 7ರಿಂದ 15 ವರ್ಷ ವಯಸ್ಸಿನವರು ಎಂದು ಪ್ರತಾಪ್ ಗಢ್ ಎಸ್ ಪಿ ಅನುರಾಗ್ ಆರ್ಯ ಹೇಳಿಕೆ ನೀಡಿದ್ದಾರೆ.

Advertisement

ಕಾರಿನಲ್ಲಿದ್ದವರು ಸಂಬಂಧಿಕರ ಮದುವೆ ಸಮಾರಂಭದಿಂದ ತಮ್ಮ ಗ್ರಾಮಕ್ಕೆ ಮರಳಿ ಬರುತ್ತಿದ್ದರು. ಅಪಘಾತವಾದ ಕೂಡಲೇ ಐವರ ಮೃತದೇಹವನ್ನು ಕಾರಿನಿಂದ ಹೊರತೆಗೆಯಲಾಯ್ತು. ಕಾರು ಟ್ರಕ್ ಒಳಗೆ ಸಿಕ್ಕಿಹಾಕಿಕೊಂಡ ಕಾರಣ ಉಳದವರ ದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next