Advertisement

ಸುವೇಂದು ಬೆಂಗಾವಲು ಪಡೆ ವಾಹನ ಚಾಲಕ ಬಂಧನ

08:05 PM May 05, 2023 | Team Udayavani |

ಕೋಲ್ಕತ: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಬೆಂಗಾವಲು ವಾಹನಗಳ ಚಾಲಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಪೇದೆ ಆನಂದ್‌ ಕುಮಾರ್‌ ಪಾಂಡೆ ಬಂಧಿತರು. ಇವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮೊಯಿನಾದಲ್ಲಿ ಗುರುವಾರ ಕಾರ್ಯಕ್ರಮ ಮುಗಿಸಿಕೊಂಡು ಹಿಂತಿರುಗುತ್ತಿದ್ದರು. ಈ ವೇಳೆ ಚಾಂದಿಪುರ್‌ ಬಳಿ ಅವರ ಬೆಂಗಾವಲು ವಾಹನಕ್ಕೆ ಯುವಕ ಶೇಖ್‌ ಇಸ್ರಾಫಿಲ್‌ ಅಡ್ಡ ಬಂದ ಪರಿಣಾಮ, ವಾಹನ ಆತನ ಮೇಲೆ ಹರಿದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ನಡೆದರೂ ಬೆಂಗಾವಲು ವಾಹನ ನಿಲ್ಲಿಸಿದೇ ಮುಂದೆ ಸಾಗಿತ್ತು. ಇದರಿಂದ ಆಕ್ರೋಶಗೊಂಡ ಸ್ಥಳೀಯರು, 1 ಗಂಟೆ ಕಾಲ ಸಂಚಾರ ಬಂದ್‌ ಮಾಡಿ ಪ್ರತಿಭಟಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next