Advertisement

Bidar: ಅ.19, 20ರಂದು ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ

04:49 PM Sep 12, 2024 | Team Udayavani |

ಬೀದರ್:‌ ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅ. 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದ್ದು ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

Advertisement

ನಗರದದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಶರಣ ಶರಣೆಯರು ಪಾಲ್ಗೊಳ್ಳುತಿದ್ದಾರೆ. ಬಸವ ಭಕ್ತರಿಗಾಗಿ ಪ್ರಸಾದ, ವಸತಿ ವ್ಯವಸ್ಥೆ ಇರಲಿದೆ. ಆದ್ದರಿಂದ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಅ.19 ರ ಬೆ.11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅಂದು ಬೆಳಿಗ್ಗೆ 5 ಗಂಟೆಗೆ ಸುಪ್ರಭಾತ ಸಮಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಬಸವ ಚಿಂತನ ಕಾರ್ಯಕ್ರಮ ನಡೆಯಲಿದೆ. ಅಂದು ಸಾ.5 ಗಂಟೆಗೆ ಧರ್ಮಚಿಂತನ ಗೋಷ್ಠಿ- 1 ಜರುಗಲಿದೆ. ಅ. 20 ರಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ ಹಾಗೂ ಬೆ. 10-30 ಕ್ಕೆ ಶರಣ ವಂದನೆ 770 ಶರಣರಿಗೆ ಶರಣಾರ್ಥಿ ಹೃದಯಸ್ಪರ್ಶಿ ಕಾರ್ಯಕ್ರಮ ನಡೆಯಲಿದೆ. ಮ.12 ರಿಂದ 2 ರ ವರೆಗೆ ಮಹಿಳಾಗೋಷ್ಠಿ ಮ.3 ರಿಂದ 5 ರವರೆಗೆ ಯುವಗೋಷ್ಠಿ ಹಾಗೂ ಸಾಯಂಕಾಲ ಸಮಾರೋಪ ಸಮಾರಂಭ ಜರುಗಲಿದೆ ಎಂದರು.

ಬೀದರ ಬಸವ ಮಂಟಪದ ಸಂಚಾಲಕರಾದ ಸದ್ಗುರು ಸತ್ಯಾದೇವಿ ಮಾತಾಜಿ ಮಾತನಾಡಿ, ಸ್ವಾಭಿಮಾನಿ ಕಲ್ಯಾಣ ಪರ್ವ ಎಂದರೆ ಇದೊಂದು ಕಲ್ಯಾಣದ ಹಬ್ಬ. ಪ್ರತಿಯೊಬ್ಬರೂ ಭಾಗವಹಿಸುವುದು ತಮ್ಮ ಆದ್ಯ ಕರ್ತವ್ಯ. ಮಹಿಳಾ ಗೋಷ್ಠಿಯಲ್ಲಿ ಮಹಿಳೆಯರ ಜ್ವಲಂತ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಚರ್ಚೆ ನಡೆಯಲಿದೆ. ಹೀಗಾಗಿ ಶರಣ ಬಂಧುಗಳು ತನು, ಮನ, ಧನ, ಸಮಯ, ಅಭಿಮಾನ ದಾಸೋಹ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ಪ್ರಮುಖರಾದ ಬಸವಂತರಾವ ಬಿರಾದಾರ, ರವಿಕಾಂತ ಬಿರಾದಾರ, ಮಲ್ಲಿಕಾರ್ಜುನ ಶೆಂಬೆಳ್ಳಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next