Advertisement

ಬಿಎಸ್ಸೆನ್ನೆಲ್‌ ಮಾರಾಟ ಬೇಡ

09:51 AM Dec 02, 2019 | Hari Prasad |

ಹೊಸದಿಲ್ಲಿ: ಈಗಾಗಲೇ ನಷ್ಟಕ್ಕೀಡಾಗಿರುವ ಬಿಎಸ್‌ಎನ್‌ಎಲ್‌, ಎಂಟಿಎನ್‌ಎಲ್‌ ಮತ್ತು ಏರ್‌ ಇಂಡಿಯಾದಿಂದ ಬಂಡವಾಳ ವಾಪಸ್‌ ತೆಗೆದುಕೊಳ್ಳುವ ಕೇಂದ್ರ ಸರಕಾರದ ಚಿಂತನೆಗೆ ಆರ್‌ಎಸ್‌ಎಸ್‌ನ ಅಂಗಸಂಸ್ಥೆ ಸ್ವದೇಶಿ ಜಾಗರಣ್‌ ಮಂಚ್‌ ವಿರೋಧ ವ್ಯಕ್ತಪಡಿಸಿದೆ. ಇಂಥ ಕ್ರಮದಿಂದ ಭ್ರಷ್ಟ ಅಧಿಕಾರಿಗಳಿಗೆ ಮತ್ತು ಭಾರೀ ಉದ್ಯಮಿಗಳಿಗೆ ಲಾಭ ಮಾಡಿಕೊಟ್ಟಂತಾಗುತ್ತದೆ ಎಂದು ಅದು ಕಳವಳ ವ್ಯಕ್ತಪಡಿಸಿದೆ.

Advertisement

ಹೊಸದಿಲ್ಲಿಯಲ್ಲಿ ನಡೆದ ಸ್ವದೇಶಿ ಜಾಗರಣ ಮಂಚ್‌ನ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಅಂಗೀಕರಿಸಲಾಗಿದೆ. ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡುವುದನ್ನು ಸ್ವದೇಶಿ ಜಾಗರಣ ಮಂಚ್‌ ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next