Advertisement

ವಾಜಪೇಯಿ ಪಾರ್ಥಿವ ಶರೀರದ ದರ್ಶನಕ್ಕೆ ಬಂದ ಅಗ್ನಿವೇಶ್ ಮೇಲೆ ಹಲ್ಲೆ

01:34 PM Aug 17, 2018 | Sharanya Alva |

ನವದೆಹಲಿ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಡೆದಿದೆ.

Advertisement

ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ತಡೆಯೊಡ್ಡಿ, ವಿರೋಧ ವ್ಯಕ್ತಪಡಿಸಿದ ಗುಂಪು ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಹಂತದಲ್ಲಿ ಅವರನ್ನು ಓಡಿಸಿಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಹೊಡೆಯಲು ಮುನ್ನುಗ್ಗುತ್ತಿರುವುದು ಕೂಡಾ ವಿಡಿಯೋದಲ್ಲಿದೆ.

ಕೊನೆಗೂ ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯದೆ ಸ್ವಾಮಿ ಅಗ್ನಿವೇಶ್ ಅವರು ವಾಪಸ್ ತೆರಳಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

ಕಳೆದ ತಿಂಗಳು ಲಿಟ್ಟಿಪಾರಾ ಮೈದಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಅಗ್ನಿವೇಶ್ ಮೇಲೆ ಜಾರ್ಖಂಡ್ ನ ಪಾಕುರ್ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ಇದು ಉದ್ದೇಶಪೂರ್ವಕದ ಹಲ್ಲೆ ಎಂದು ಸ್ವಾಮಿ ಅಗ್ನಿವೇಶ್ ಬಳಿಕ ಪ್ರತಿಕ್ರಿಯೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next